ಉಡುಪಿ ಜಿಲ್ಲಾ ಮತ್ತು ಬ್ಲಾಕ್ ಮಹಿಳಾ ಕಾಂಗ್ರೆಸ್‌ನಿಂದ ಗೋಪೂಜೆ

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಮತ್ತು ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಬಲಿ ಪಾಡ್ಯಮಿಯ ಪ್ರಯುಕ್ತ ಗೋಪೂಜಾ ಕಾರ್ಯಕ್ರಮವನ್ನು ಬ್ರಹ್ಮಗಿರಿಯ ಶ್ರೀಮತಿ ಸ್ವರ್ಣಲತಾ ಭಂಡಾರಿ ಅವರ ನಿವಾಸ ಗೋಕುಲ ದಲ್ಲಿ ಆಯೋಜಿಸಲಾಗಿತ್ತು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ ಹಾಗೂ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಮಮತಾ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸುಮಾರು ಏಳು ಹಸುಗಳಿಗೆ ಪೂಜೆ ಸಲ್ಲಿಸಿ ಆರತಿ ಬೆಳಗಿಸಿ ದೀಪಾವಳಿಯ ತಿನಿಸುಗಳನ್ನು ತಿನ್ನಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಜ್ಯೋತಿ ಹೆಬ್ಬಾರ್, ನಗರಸಭೆಯ ಮಾಜಿ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಮಾಧವ ಬನ್ನಂಜೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ಶ್ರೀಮತಿ ಆಶಾ ಚಂದ್ರಶೇಖರ್, ಪ್ರಮೀಳಾ, ಜಯಶ್ರೀ ಶೇಟ್, ಸುಮನಾ ಸುರೇಂದ್ರ, ಉಡುಪಿ ಬ್ಲಾಕ್‌ನ ಶ್ರೀ ನಾಗರಾಜ್ ಅಮೀನ್, ಸುರೇಂದ್ರ ಆಚಾರ್ಯ, ಕಲಾವಿದ ಶ್ರೀ ಮಹೇಶ್ ರಾವ್, ಸಂಜಯ್ ಆಚಾರ್ಯ ಮತ್ತು ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply