ಕಾರ್ಕಳ ಎಪಿಎಂಸಿ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ ಕೋವಿಡ್ ಗೆ ಬಲಿ

ಕಾರ್ಕಳ: ಕಾರ್ಕಳ ಎಪಿಎಂಸಿ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ (65) ಕೋವಿಡ್ ಕಾರಣದಿಂದ ನಿಧನರಾಗಿದ್ದಾರೆ.

ಬೆಳ್ಮಣ್ ರೋಟರಿಯ ಸಕ್ರಿಯ ಸದಸ್ಯರಾಗಿದ್ದ ಮೋಹನ್ ಬೆಳ್ಮಣ್ ಬೋರ್ಡ್ ಶಾಲೆಯ ಬಳಿ ಕೃಷ್ಣ ಪ್ರಸಾದ ನಿಲಯ ನಿವಾಸಿ. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.ಬಿಜೆಪಿ ಬೆಳ್ಮಣ್ ಘಟಕದ ಮಾಜಿ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿದ್ದರು.

ಕೋವಿಡ್ ಗೆ ಬಲಿಯಾದ ಇವರು ಪತ್ನಿ ಓರ್ವ ಪುತ್ರಿಯನ್ನು ಅಗಲಿದ್ದಾರೆ.ರೋಟರಿ
ಕ್ಲಬ್ ಬೆಳ್ಮಣ್ ನ ಕ್ರಿಯಾಶೀಲ ಸದಸ್ಯರಾಗಿದ್ದ ಇವರು, ನಂದಳಿಕೆ ಬೋರ್ಡ್ ಶಾಲೆ, ಬೆಳ್ಮಣ್ ಸರಕಾರಿ ಪ್ರೌಢಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

 
 
 
 
 
 
 
 
 

Leave a Reply