ವೀಡಿಯೊ ಚಿತ್ರೀಕರಣ ಘಟನೆ: ಎಬಿವಿಪಿಯಿಂದ ಪ್ರತಿಭಟನೆ

ಉಡುಪಿ: ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರಲ್ಲಿ ವೀಡಿಯೊ ಚಿತ್ರೀಕರಣ ವಿವಾದ ಘಟನೆ ಸಂಬಂಧಿಸಿದಂತೆ ಗುರುವಾರ ಎಬಿವಿಪಿ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು.
ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸುರಿಯುತ್ತಿರುವ ಮಳೆಯಲ್ಲೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟುಹಿಡಿದರು. ಈ ಸಂದರ್ಭ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು.
ಈ ಕುರಿತು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರರವರು ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ, ಅವರ ಪ್ರಶ್ನೆಗಳಿಗೆ ಉತ್ತರ ನೀಡಿದರು ಎಂದು ತಿಳಿದು ಬಂದಿದೆ.
 
 
 
 
 
 
 
 
 
 
 

Leave a Reply