ಖಾಸಗಿ ಜಮೀನನ್ನು ವಾಣಿಜ್ಯ ಉದ್ದೇಶಕ್ಕೆ ಕನ್ಚರ್ಷನ್ ಮಾಡಿ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 2.50 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಎಸಿಬಿ ಅಧಿಕಾರಿಗಳು ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಮೂವರು ಎಸಿಬಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದಿದ್ದಾರೆ. ನಗರದ ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ಎಸಿಬಿ ಎಸ್ಪಿ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಎಂಜಿನಿಯರ್ ಗುರುಪ್ರಸಾದ್, ನಯಿಮಾ ಸಯೀದ್ ಮತ್ತು ಪ್ರಸಾದ್ ಎಂಬವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.