ಉಡುಪಿಯಲ್ಲಿ ಎರಡೂವರೆ ವರ್ಷದ ಮಗುವಿನ ಅಪಹರಣ

ಉಡುಪಿ : ಕರಾವಳಿ ಬೈಪಾಸ್ ಬಳಿಯ ಶೆಡ್ ಒಂದರಲ್ಲಿ ವಾಸವಾಗಿದ್ದ ಬಾಗಲಕೋಟೆ ಮೂಲದ ದಂಪತಿಯ ಮಗುವನ್ನು ಭಾನುವಾರ ಅಪರಿಚಿತ ವ್ಯಕ್ತಿಯೋರ್ವ ಅಪಹರಿಸಿರುವ ಕುರಿತು ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಪಹರಣಕ್ಕೊಳಗಾದ ಮಗುವನ್ನು ಮುಧೋಳ ತಾಲೂಕಿನ ಭಾರತಿ ಮತ್ತು ಅರುಣ್ ದಂಪತಿ ಪುತ್ರ ಶಿವರಾಜ್ (2.4 ವರ್ಷ) ಎಂದು ಗುರುತಿಸಲಾಗಿದೆ.ಭಾರತಿ ಮತ್ತು ಅರುಣ್ ದಂಪತಿಗೆ ಅವಳಿ ಜವಳಿ ಮಕ್ಕಳಿದ್ದು, ಅದರಲ್ಲಿ ಧೀರಜ್ ಎಂಬ ಮಗುವನ್ನು ಊರಿನಲ್ಲೇ ಬಿಟ್ಟು ಶಿವರಾಜ್ ನೊಂದಿಗೆ ಕಳೆದ ಸುಮಾರು ಎರಡು ತಿಂಗಳ ಹಿಂದೆ ಉಡುಪಿಗೆ ಬಂದಿದ್ದರು.

ಇತ್ತೀಚೆಗೆ ಬಾಗಲಕೋಟೆಯ ಪರ್ಶು ಎಂದು ಹೇಳಿಕೊಂಡು ಬಂದ ವ್ಯಕ್ತಿಯೊಬ್ಬ ಈ ದಂಪತಿಗೆ ಪರಿಚಯವಾಗಿದ್ದು, ಭಾನುವಾರ ಬೆಳಿಗ್ಗೆ ಮಗುವಿಗೆ ಚಹಾ ಕುಡಿಸಿಕೊಂಡು ಬರುತ್ತೇನೆ ಎಂದು ಮಗುವನ್ನು ಕರೆದುಕೊಂಡು ಹೋದಾತ ವಾಪಸ್ ಬಂದಿಲ್ಲ. ಆತನೇ ತಮ್ಮ ಮಗುವನ್ನು ಅಪಹರಿಸಿಕೊಂಡು ಹೋಗಿರಬಹುದೆಂದು ಭಾರತಿ- ಅರುಣ್ ದಂಪತಿ ದೂರು ನೀಡಿದ್ದಾರೆ.

 
 
 
 
 
 
 
 
 
 
 

Leave a Reply