ಹಿಂದೂ ಯುವಕನ‌ ಮೇಲೆ‌ ಹಲ್ಲೆ; ಮೂವರು ಅನ್ಯಕೋಮಿನ ಆರೋಪಿಗಳ ಬಂಧನ

ಶಿವಮೊಗ್ಗ: ಹಿಂದೂ ಯುವಕನ‌ ಮೇಲೆ‌ ಇಟ್ಟಿಗೆಯಿಂದ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಅನ್ಯ ಕೋಮಿನ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತನ್ವೀರ್‌,ಅಜರ್,ಫರಾಜ್ ಬಂಧಿತರು.ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ.

ಇವರ ಮೇಲೆ ಭರ್ಮಪ್ಪ ನಗರದ ಬಳಿ ಪ್ರವೀಣ್ ಎಂಬ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಇಟ್ಟಿಗೆಗಳಿಂದ ಹಲ್ಲೆ ಮಾಡಿರುವ ಆರೋಪ‌ ಇದೆ.ಕೆಲ ದಿನಗಳ ಹಿಂದೆ ಪ್ರವೀಣ್, ಪ್ರಕಾಶ್ ಮತ್ತು ಆರೋಪಿ ತನ್ವೀರ್ ಮಧ್ಯೆ ಮಾತಿನ ಚಕಮಕಿಯಾಗಿತ್ತು. ಇದಕ್ಕೆ ಪ್ರತಿಕಾರವಾಗಿ ಹಲ್ಲೆ ಮಾಡಲು ಆರೋಪಿಗಳು ಬಂದಿದ್ದರು ಎಂದು ತಿಳಿದು ಬಂದಿದೆ.

ಬಂಧಿತ ಮೂವರು ಆರೋಪಿಗಳ ವಿರುದ್ಧ ಈಗಾಗಲೇ ವಿವಿಧ ಠಾಣೆಗಳಲ್ಲಿ ಹಲವು ಅಪರಾಧ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

 
 
 
 
 
 
 
 
 
 
 

Leave a Reply