ಬಂಧನಕ್ಕಾಗಿ ಬಲೆ ಬೀಸಿದ್ದ ಪೊಲೀಸರ ತಂಡಕ್ಕೆ ಬೇಗೂರು ಕೆರೆ ಬಳಿ ಆರೋಪಿಗಳು ಅಡಗಿರುವ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಪೊಲೀಸರು ಅಲ್ಲಿಗೆ ಹೋದಾಗ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ನಡೆಸಿದರು.
ಈ ಸಂದರ್ಭ ಕೋರಮಂಗಲ ಇನ್ಸ್ಪೆಕ್ಟರ್ ಬಿ.ಕೆ. ರವಿ ಮತ್ತು ಸಿದ್ದಪ್ಪ ಸರ್ವಿಸ್ ಪಿಸ್ತೂಲ್ ನಿಂದ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದರೂ ಲೆಕ್ಕಿಸದೆ ಹಲ್ಲೆ ನಡೆಸಿದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.