ಹಂಗಾರಕಟ್ಟೆ: ಕೆನರಾಗೆ ಕನ್ನ  

ಉಡುಪಿ: ಮಾಬುಕಳ ಬಸ್ ನಿಲ್ದಾಣದ ಹತ್ತಿರದ ಹೆಬ್ಬಾರ್ ಕಾಂಪ್ಲೆಕ್ಸ್ ನಲ್ಲಿರುವ ಹಂಗಾರಕಟ್ಟೆ ಶಾಖೆಯ ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಕಿರುವುದು ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಗುರುವಾರ ತಡ ರಾತ್ರಿ ಕಳ್ಳರು ಎಟಿಎಂ ಹೊರಗಡೆ ಇರುವ ಸಿಸಿಟಿವಿ ಕ್ಯಾಮರಾ ಹಾಗೂ ಸೈರನ್ ಕೇಬಲ್ ನ್ನು ತುಂಡು ಮಾಡಿದ್ದು, ಒಳಗಡೆ ಇದ್ದ ಎಟಿಎಂ ಯಂತ್ರವನ್ನು ಒಡೆಯಲು ಯತ್ನಿಸಿದ್ದಾರೆ.

ಈ ವೇಳೆ ಪೂರ್ತಿಯಾಗಿ ಒಡೆಯಲು ಸಾಧ್ಯವಾಗದಿದ್ದರೂ ರಿಜೆಕ್ಟ್ ಬಾಕ್ಸ್ ನಲ್ಲಿರುವ ಸುಮಾರು 16700 ರೂ. ನಗದು ದೋಚಿದ್ದಾರೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಚಂದ್ರ, ಉಡುಪಿ ಡಿವೈಎಸ್ಪಿ ಸುಧಾಕರ್ ನಾಯ್ಕ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಬ್ರಹ್ಮಾವರ ಠಾಣಾಧಿಕಾರಿ ಗುರುನಾಥ್ ಹಾದಿ ಮನೆ, ಕೋಟ ಆರಕ್ಷಕ ಠಾಣಾಧಿಕಾರಿ ಸಂತೋಷ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನೆಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply