ಕಾರವಾರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 17 ಲಕ್ಷಕ್ಕೂ ಹೆಚ್ಚು ನಗದು ವಶ

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 17ಲಕ್ಷಕ್ಕೂ ಅಧಿಕ ಹಣವನ್ನು ಕಾರವಾರ ಜಿಲ್ಲೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಯಶವಂತ ಸುಕ್ರಗೊಂಡ ಕಟಗಾರ ಕೊಪ್ಪ ಭಟ್ಕಳ,  ಶ್ರೀನಿವಾಸ ನಾರಾಯಣಗೌಡ ಗುಣವಂತೆ ಹೊನ್ನಾವರ, ರಘು ಅನಂತ ನಾಯಕ್ ಈ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ನಗರ ಠಾಣೆಯ ಪಿಎಸ್ಐ ಸಂತೋಷ್ ಹಾಗೂ ಸಿಬ್ಬಂದಿ ಸರ್ಪನ ಕಟ್ಟೆ ಪೊಲೀಸ್ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುತ್ತಿದ್ದಾಗ ಉಡುಪಿ ಕಡೆಯಿಂದ ಹೊರಟಿದ್ದ ಕಾರಿನಲ್ಲಿ 14,0,125 ಲಕ್ಷ ನಗದು ಪತ್ತೆಯಾಗಿದೆ.
ಆರೋಪಿಗಳು ಈ ಹಣವನ್ನು ಮುರುಡೇಶ್ವರದ ಕಡೆಗೆ ಸಾಗಿಸುತ್ತಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ ಈ ಕುರಿತು ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply