ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 17ಲಕ್ಷಕ್ಕೂ ಅಧಿಕ ಹಣವನ್ನು ಕಾರವಾರ ಜಿಲ್ಲೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಯಶವಂತ ಸುಕ್ರಗೊಂಡ ಕಟಗಾರ ಕೊಪ್ಪ ಭಟ್ಕಳ, ಶ್ರೀನಿವಾಸ ನಾರಾಯಣಗೌಡ ಗುಣವಂತೆ ಹೊನ್ನಾವರ, ರಘು ಅನಂತ ನಾಯಕ್ ಈ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯ ಪಿಎಸ್ಐ ಸಂತೋಷ್ ಹಾಗೂ ಸಿಬ್ಬಂದಿ ಸರ್ಪನ ಕಟ್ಟೆ ಪೊಲೀಸ್ ಚೆಕ್ಪೋಸ್ಟ್ ಬಳಿ ತಪಾಸಣೆ ನಡೆಸುತ್ತಿದ್ದಾಗ ಉಡುಪಿ ಕಡೆಯಿಂದ ಹೊರಟಿದ್ದ ಕಾರಿನಲ್ಲಿ 14,0,125 ಲಕ್ಷ ನಗದು ಪತ್ತೆಯಾಗಿದೆ.
ಆರೋಪಿಗಳು ಈ ಹಣವನ್ನು ಮುರುಡೇಶ್ವರದ ಕಡೆಗೆ ಸಾಗಿಸುತ್ತಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ ಈ ಕುರಿತು ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.