ವೇಶ್ಯಾವಾಟಿಕೆ ಆರೋಪ: ಮೂವರ ಬಂಧನ,  ಹೋಮಕುಂಡದಲ್ಲಿ ಸುಟ್ಟಿದ್ದ ಪ್ರಕರಣದ ಆರೋಪಿ ರಾಜೇಶ್ವರಿ ಶೆಟ್ಟಿ ಮೇಲೆ ಕೇಸ್

ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಹೋಮಕುಂಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಯ ಮೇಲೆ ಪೊಲೀಸರು ದಾಖಲಿಸಿದ್ದು ಮೂವರು ಆರೋಪಿಗಳನ್ನು ಬಂಧೀಸಿದ್ದಾರೆ.

ಬಂಧಿತ ಆರೋಪಿಗಳನ್ನು ಶೇಖರ ಶೆಟ್ಟಿ, ಜಾನ್ಸನ್ ಡಿ ಅಲ್ಮೇಡಾ, ಹರ್ಷಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಶೇಖರ ಶೆಟ್ಟಿ, ಮನು, ರಾಜು, ಜೋನ್ಸನ್ ಡಿ. ಅಲ್ಮೇಡ ಮತ್ತು ರಾಜೇಶ್ವರಿ ಶೆಟ್ಟಿ ಎಂಬವರು ಒಟ್ಟು ಸೇರಿ ಹೊಟೇಲಿನ ರೂಮಿನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆನ್ನಲಾಗಿದೆ.

ಈ ಕುರಿತ ಖಚಿತ ವರ್ತಮಾನದ ಮೇರೆಗೆ ಹೊಟೇಲಿಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದರು. ಕೃತ್ಯಕ್ಕೆ ಸಂಬಂಧಿಸಿ 4 ಮೊಬೈಲ್ ಫೋನ್, ನಗದು 6,730 ರೂ: ಹಾಗು ಇತರ ಸೊತ್ತುಗಳನ್ನು ವಶಪಡಿಸಿ ಕೊಳ್ಳಲಾಗಿದೆ.

ರಾಜೇಶ್ವರಿ ಶೆಟ್ಟಿ ಕೊಲೆಯಾದ ಉದ್ಯಮಿ ಭಾಸ್ಕರ್ ಶೆಟ್ಟಿಯವರ ಪತ್ನಿಯಾಗಿದ್ದು, ಈಕೆಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿ ಭಾಸ್ಕರ್ ಶೆಟ್ಟಿಯನ್ನು ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ಧಳು.

ಈಗ ರಾಜೇಶ್ವರಿ ಶೆಟ್ಟಿ ಮಾಲಕತ್ವದ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ನಡೆಯುತ್ತಿದ್ದ ಆರೋಪದ ಮೇಲೆ ಡಿಸಿಐಬಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದು, ರಾಜೇಶ್ವರಿ ಶೆಟ್ಟಿ ಸೇರಿದಂತೆ ಮೂವರ ಬಂಧನ ಬಾಕಿ ಇರುವುದಾಗಿ ಡಿಸಿಐಬಿ ಇನ್ಸ್ ಪೆಕ್ಟರ್ ಮಂಜಪ್ಪ ತಿಳಿಸಿದ್ದಾರೆ. ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 
 
 
 
 
 
 
 
 
 
 

Leave a Reply