ಮಂಗಳೂರು : ಇಲ್ಲಿನ ವಳಚ್ಚಿಲ್ ನಲ್ಲಿರುವ ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಹಾಗೂ ಆಡಳಿತ ಮಂಡಳಿಯ ವಿರುದ್ದ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಎಕ್ಸ್ ಪರ್ಟ್ ವಿದ್ಯಾಸಂಸ್ಥೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. 30 ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ನಲ್ಲಿ ಇರಿಸಿಕೊಂಡು ಶೈಕ್ಷಣಿಕ ಚಟುವಟಿಕೆ ನಡೆಸಲಾಗಿದ್ದು,ಪೋಷಕರು ಕರೆದೊಯ್ಯಲು ಬಂದಾಗಲೂ ಕಳುಹಿಸಿಕೊಟ್ಟಿರಲಿಲ್ಲ.ರಾಜ್ಯದಲ್ಲಿ ಕೊರೊನಾ ಸೋಂಕನ್ನು ತಡೆಯಲು ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲಾಗಿದೆ. ಆದರೆ ಈ ಸಂಸ್ಥೆ ಶೈಕ್ಷಣಿಕ ಚಟುವಟಿಕೆ ನಡೆಸುವ ಮೂಲಕ ಕೊರೊನಾ ಸೋಂಕು ಹರಡಲು ಕಾರಣರಾಗಿದ್ದಾರೆ.
ಎಕ್ಸ್ ಪರ್ಟ್ ವಿದ್ಯಾಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್ ಹಾಗೂ ಆಡಳಿತ ಮಂಡಳಿಯ ವಿರುದ್ದ ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿಯಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.