ಫಾಝಿಲ್ ಹತ್ಯೆ~ ಆರು ಮಂದಿ ಅಂದರ್

ಸುರತ್ಕಲ್ ನ ಫಾಝಿಲ್ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಹಾಸ್ ಶೆಟ್ಟಿ (23), ಮೋಹನ್ ಅಲಿಯಾಸ್ ನೇಪಾಳಿ ಮೋಹನ್ (25), ಗಿರಿಧರ್ (23), ಅಭಿಷೇಕ್ (21), ಶ್ರೀನಿವಾಸ್ (24), ದೀಕ್ಷೀತ್ (21) ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಆರು ಮಂದಿ ಆರೋಪಿಗಳು ಕೃತ್ಯದಲ್ಲಿ ನೇರವಾಗಿ ಭಾಗಿಯಾದವರು. ಆರೋಪಿಗಳನ್ನು ಮಂಗಳವಾರ ಬೆಳಗ್ಗಿನ ಜಾವ 5.30 ವೇಳೆಗೆ ಉಡುಪಿ ಉದ್ಯಾವರದಲ್ಲಿ ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ , ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು. 

ಆರೋಪಿಗಳು ಫಾಝಿಲ್ ನನ್ನು ಕೊಲೆ ನಡೆಸಿರುವುದು ಉದ್ದೇಶಪೂರ್ವಕ. ಬೇರೆಯವರನ್ನು ಗುರಿಯಾಗಿಸಿ, ಅವರು ಸಿಗದೇ ಇರುವಾಗ ಫಾಝಿಲ್ ನ ಕೊಲೆ ನಡೆಸಲಾಗಿದೆ ಎಂಬುದು ತಪ್ಪು ಮಾಹಿತಿಯಾಗಿದೆ ಎಂದು ಶಶಿಕುಮಾರ್ ತಿಳಿಸಿದರು. ಜು.28 ರಂದು ರಾತ್ರಿ ಸುರತ್ಕಲ್ ನಲ್ಲಿ ಮಂಗಳಪೇಟೆಯ ಮಹಮ್ಮದ್ ಫಾಝಿಲ್ ನನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾರು ಮಾಲಕ ಅಜಿತ್ ಕ್ರಾಸ್ತಾ ಎಂಬಾತನನ್ನು ಬಂಧಿಸಲಾಗಿದೆ.

 
 
 
 
 
 
 
 
 
 
 

Leave a Reply