ಉಡುಪಿಯ ಪುರೋಹಿತರೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ.
ಮೇ 4ರಂದು ಪುರೋಹಿತ ಗಣೇಶ್ ಕೆ.ಅವರ ಸಂಖ್ಯೆಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ನಿಮ್ಮ ಕೆನರಾ ಬ್ಯಾಂಕ್ಗೆ ಸಂಬಂಧಪಟ್ಟಂತೆ ಕೆವೈಸಿ ಅಪ್ಡೇಟ್ ಮಾಡಬೇಕಾಗಿರುವುದರಿಂದ ನಿಮ್ಮ ಮೊಬೈಲ್ ಸಂಖ್ಯೆಗೆ ಬಂದಿರುವ ಒಟಿಪಿ ನೀಡಿ ಎಂದು ಹೇಳಿದ್ದರು. ಅದನ್ನು ನಂಬಿದ ಗಣೇಶ್ ಅವರು ನಂಬರ್ ನೀಡಿದ್ದು, ಕೂಡಲೇ ಅವರ ಬ್ಯಾಂಕ್ ಖಾತೆಯಿಂದ 1,90,000 ರೂ. ಆರೋಪಿಯ ಖಾತೆಗೆ ವರ್ಗಾವಣೆಯಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.