ಕಾರ್ಕಳ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಅಮೃತ್ ಶೆಟ್ಟಿ (22) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಹಿರ್ಗಾನ ಗೊರಟಿ ಚರ್ಚ್ ಬಳಿಯ ನಿವಾಸಿ ಅಶೋಕ್ ಶೆಟ್ಟಿ ಎಂಬವರ ಪುತ್ರ ಅಮೃತ್ ಶೆಟ್ಟಿ ಇಂದು ಮಧ್ಯಾಹ್ನ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಪ್ರಕರಣ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿದೆ.