ಕುಂದಾಪುರ: ತಾಲೂಕಿನ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ಶುಕ್ರವಾರ ನಡೆದ ಮೆಹಂದಿ ಮದುವೆ ಕಾರ್ಯಕ್ರಮದಲ್ಲಿ ಮಾಸ್ಕ್ ಇಲ್ಲದೆ ಅತಿಥಿಗಳು ಭಾಗವಹಿಸಿದ್ದು, ಮೆಹಂದಿ ಆಯೋಜಕರ ವಿರುದ್ದ ಪ್ರಕರಣ ದಾಖಲಾಗಿದೆ.
ಕುಂದಾಪುರ ತಾಲೂಕಿನ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ಭುಜಂಗ ಶೆಟ್ಟಿ ಎಂಬವರ ಮನೆಯಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಅತಿಥಿಗಳು ಮಾಸ್ಕ್ ಧರಿಸದೆ ಭಾಗವಹಿಸಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಮಾಡಿದ್ದು ಇವರ ವಿರುದ್ದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ರಾಘವೇಂದ್ರ ವರ್ಣೇಕರ್ ಅವರು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆಯೋಜಕ ಭುಜಂಗ ಶೆಟ್ಟಿ ಮತ್ತು ಇತರ ಏಳು ಮಂದಿಯ ವಿರುದ್ದ ದೂರು ದಾಖಲಿಸಿದ್ದಾರೆ.