ಮೋದಿಕೇರ್‌ ಚೈನ್‌ ಲಿಂಕ್‌ ವ್ಯವಹಾರದಲ್ಲಿ ಭಾಗಿ; 8 ಶಿಕ್ಷಕರು ಅಮಾನತು

ಮೋದಿ ಕೇರ್‌ ಚೈನ್‌ ಲಿಂಕ್‌ ವ್ಯವಹಾರದಲ್ಲಿ ಭಾಗಿಯಾದ ಆರೋಪದಡಿ ಜಿಲ್ಲೆಯ ಎಂಟು ಮಂದಿ ಸರಕಾರಿ ಶಾಲಾ ಶಿಕ್ಷಕರನ್ನು ಡಿಡಿಪಿಐ ಕೆ. ರವಿಶಂಕರ್‌ ರೆಡ್ಡಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 500 ಶಿಕ್ಷಕರು ಈ ವ್ಯವಹಾರ ನಡೆಸುತ್ತಿದ್ದಾರೆ ಎಂದು ಹೊಳಲ್ಕೆರೆಯ ಕೆ. ಮಲ್ಲಿಕಾರ್ಜುನ್‌ ಅವರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು.

ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಜರಗಿಸಿದೆ. ಇಲಾಖೆ ಆಯುಕ್ತರ ಸೂಚನೆಯಂತೆ 16 ಶಿಕ್ಷಕರಿಗೆ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಫೆ.1ರಂದು ಚಿತ್ರದುರ್ಗದ ಡಯಟ್‌ನಲ್ಲಿ ಈ ಶಿಕ್ಷಕರ ಜಂಟಿ ವಿಚಾರಣೆ ನಡೆಸಲಾಯಿತು. ಎಂಟು ಶಿಕ್ಷಕರು ಖಾಸಗಿ ವ್ಯವಹಾರದಲ್ಲಿ ಪಾಲ್ಗೊಂಡಿರುವುದು ವಿಚಾರಣೆ ವೇಳೆ ಸಾಬೀತಾಗಿತ್ತು.

 
 
 
 
 
 
 
 
 
 
 

Leave a Reply