ಹಾಡು ಹಗಲೆ ಬಿ.ಟೆಕ್ ವಿದ್ಯಾರ್ಥಿನಿಯ ಭೀಕರ ಕೊಲೆ ಪ್ರಕರಣ- ಆರೋಪಿಗೆ ಮರಣ ದಂಡನೆ ವಿಧಿಸಿದ ವಿಶೇಷ ನ್ಯಾಯಾಲಯ

ಕಳೆದ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಶಶಿ ಕೃಷ್ಣ ಎಂಬಾತ 4 ನೇ ವರ್ಷದ ಬಿ.ಟೆಕ್ ವಿದ್ಯಾರ್ಥಿನಿ ರಮ್ಯಾ ಎಂಬಾಕೆಯನ್ನು ನಡು ರಸ್ತೆಯಲ್ಲಿ ಹಾಡು ಹಗಲೆ ಕೊಲೆ ಮಾಡಿದ್ದನು. ಕೊಲೆ ಮಾಡಿದ ಆತ ಅಲ್ಲಿದ್ದ ಸಾರ್ವಜನಿಕರ ಕೈಗೆ ಸಿಗದೆ ಎಸ್ಕೇಪ್ ಆಗಿದ್ದನು.

ಸ್ವಾತಂತ್ರ್ಯ ದಿನಾಚರಣೆಯಂದು ಹಾಡು ಹಗಲೆ ಯುವತಿಯನ್ನು ಕೊಲೆ ಮಾಡಿದ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಸಿಸಿಟಿವಿ ದೃಶ್ಯ ಆಧರಿಸಿ ಪೋಲಿಸರು ಶಶಿ ಕೃಷ್ಣನನ್ನು ಬಂಧಿಸಲು ಮುಂದಾಗಿದ್ದರು. ಆ ವೇಳೆ ಕೈ ಕತ್ತರಿಸಿಕೊಂಡು ಆತ್ಮಹತ್ಯೆಗೆ ಆತ ಯತ್ನಿಸಿದ್ದನು. ಅದನ್ನು ತಡೆದ ಪೋಲಿಸರು ಕೊನೆಗೂ ಶಶಿಕೃಷ್ಣನ ಕೈಗೆ ಕೋಳ ತೊಡಿಸಿದರು.

ಈ ಪ್ರಕರಣದ ವಿಚಾರಣೆಯನ್ನು ತೀವ್ರಗತಿಯಲ್ಲಿ ನಡೆಸಿದ ಗುಂಟೂರು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ರಾಂಗೋಪಾಲ್ ಅವರು ಆರೋಪಿ ಶಶಿಕೃಷ್ಣನಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ.

ಇದೊಂದು ಅಪರೂದ ಪ್ರಕರಣ ಎಂದ ಕೋರ್ಟ್ ಪರಿಗಣಿಸಿದೆ. ಸ್ವಾತಂತ್ರ್ಯ ದಿನಾಚರಣೆಯಂದು ನಡೆದ ಕೊಲೆ ಬಹಳ ಸಂಚಲನ ಮೂಡಿಸಿತ್ತು. ಈ ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿ ನ್ಯಾಯಾಲಯ ಆರೋಪಿ ಶಶಿಕೃಷ್ಣನಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply