ವಿವಾಹಿತ ಮಹಿಳೆಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ವಿವಾಹಿತ ಮಹಿಳೆಯೊಬ್ಬರ ಮೇಲೆ ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬ ಮಾರಕಾಸ್ತ್ರಗಳಿಂದ ಧಾಳಿ ನಡೆಸಿದ ಪರಿಣಾಮ ಮಹಿಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾಣಿ ಬಳಿ ನೆರಳಕಟ್ಟೆಯಲ್ಲಿ ಇಂದು ಸಂಭವಿಸಿದೆ.

ಸಾವನ್ನಪ್ಪಿದ ಮಹಿಳೆ ಮಾಣಿ ನಿವಾಸಿ ದಿವಂಗತ ತ್ಯಾಂಪ ಪೂಜಾರಿಯವರ ಮಗಳು, ಈಗ ಮದುವೆಯಾಗಿ ಅನಂತಾಡಿಯ ದೇವಿನಗರದಲ್ಲಿ ವಾಸಿಸುತ್ತಿರುವ ಶಕುಂತಲ (35) ಎಂದು ತಿಳಿದು ಬಂದಿದೆ.

ಇಂದು ಸಂಜೆ ಬಂಟ್ವಾಳ ತಾಲೂಕಿನ ಪುತ್ತೂರು ಬಿಸಿರೋಡ್ ರಸ್ತೆಯ ಮಾಣಿ ಬಳಿಯ ನೇರಳಕಟ್ಟೆಯ ‘’ಜನಪ್ರಿಯ ಹಾಲ್’’ ಬಳಿ ಶಕುಂತಾಳ ಪರಿಚಯಸ್ಥ ಆಟೋರಿಕ್ಷಾದವನ ಜೊತೆ ತನ್ನ ಸ್ಕೂಟರ್ ಅನ್ನು ನಿಲ್ಲಿಸಿ ಮಾತನಾಡುತ್ತಿದ್ದರು. ಈ ಸಂದರ್ಭ ಮಾತಿಗೆ ಮಾತು ಬೆಳೆದು ಆಟೋ ಚಾಲಕ ಈಕೆಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರಿಕ್ಷಾದೊಂದಿಗೆ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶಕುಂತಲ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಈ ಆರೋಪಿ ಆಟೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮೃತ ಶಕುಂತಳಾ ಅವರು ಪುತ್ತೂರಿನಲ್ಲಿ ತನ್ನ ಪತಿಯೊಂದಿಗೆ ಕ್ಯಾಂಟಿನ್‌ ನಡೆಸುತ್ತಿದ್ದರು ಎಂದು ತಿಳಿಯಲಾಗಿದೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌‌.ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 
 
 
 
 
 
 
 
 

Leave a Reply