ಮಹಿಳೆಯನ್ನ ಬರ್ಬರವಾಗಿ ಕೊಲೆ ಮಾಡಿ ಬೆಡ್ ಶೀಟ್ನಲ್ಲಿ ಸುತ್ತಿಟ್ಟ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ತಿರುಪಾಳ್ಯದ ವಿನಾಯಕ ನಗರದಲ್ಲಿ ನಡೆದಿದೆ.
ಕೊಲೆಯಾದವಳನ್ನ ಪವಿತ್ರ ಉರುಫ್ ಶ್ರುತಿ(24) ಅಂತ ಗುರುತಿಸಲಾಗಿದೆ. ಬಿಲ್ಡಿಂಗ್ ಒಂದರ ಮೂರನೇ ಮಹಡಿಯಲ್ಲಿ ಪತಿ ಅರವಿಂದ್ ಹಾಗೂ ಪವಿತ್ರ ಇಬ್ಬರೂ ಕೂಡ ವಾಸವಾಗಿದ್ದರು ಅಂತ ಹೇಳಲಾಗುತ್ತಿದೆ. ಇಬ್ಬರೂ ಕೂಡ ಪ್ರೀತಿಸಿ ಮದುವೆಯಾಗಿದ್ದರು, ಮೂಲತಃ ವಿಜಯಪುರ ಜಿಲ್ಲೆಯ ಇವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಇವರ ಮನೆಯಯಿಂದ ದುರ್ವಾಸನೆ ಬರುತ್ತಿರುವುದನ್ನು ನೋಡಿದ ಅಕ್ಕ ಪಕ್ಕದವರು ಮನೆ ಮಾಲೀಕರಿಗೆ ತಿಳಿಸಿದ್ದು ಮನೆಯ ಬಳಿ ಬಂದು ಬಾಗಿಲು ತೆರೆದು ನೋಡಿದಾಗ ಯುವತಿ ಪವಿತ್ರಳನ್ನು ಕೊಲೆ ಮಾಡಿ ಬೆಡ್ ಶೀಟ್ನಲ್ಲಿ ಸುತ್ತಿಟ್ಟಿರುವುದು ಗೊತ್ತಾಗಿದೆ. ಕೂಡಲೇ ಹೆಬ್ಬಗೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಐದಾರು ದಿನಗಳ ಹಿಂದೆ ಕೊಲೆ ಮಾಡಿರುವುದು ಬೆಳಕಿಗೆ ಬಂದಿದ್ದು, ದೇಹ ಗುರುತು ಸಿಗದಷ್ಟು ಕೊಳೆತು ಹೋಗಿತ್ತು.