ಹಾಪುರ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಪತ್ನಿ ಸೋನಿಯಾಳನ್ನು ದರೋಡೆಕೋರರು ಕೊಲೆ ಮಾಡಿದ್ದ ಎಂದು ಪೊಲೀಸರಿಗೆ ದೂರು ನೀಡಿದ್ದ. ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ದ್ದಾರೆ. ಈ ವೇಳೆ ಸೋನಿಯಾ ಅವರ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರಿಂದ ಅನುಮಾನಗೊಂಡ ಪೊಲೀಸರು ವಿಕಾಸ್ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಸೋನಿಯಾಳನ್ನು ವಿವಾಹವಾಗಿ ಕೆಲವು ವರ್ಷಗಳ ನಂತರ ವಿಕಾಸ್ ಅಕ್ರಮ ಸಂಬಂಧಗಳನ್ನು ಹೊಂದಿದ್ದ. ಇದರಿಂದಾಗಿ ಇಬ್ಬರ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು. ಇದರಿಂದಾಗಿ ಸೋನಿಯಾಳನ್ನು ಕೊಲೆ ಮಾಡಲು ವಿಕಾಸ್ ಸಂಚು ರೂಪಿಸಿ ಹತ್ಯೆಗೈದಿದ್ದಾನೆ ಎನ್ನುವುದು ವಿಚಾರಣೆ ವೇಳೆ ಬಯಲಾಗಿದೆ.
ಅಷ್ಟೇ ಅಲ್ಲದೇ ಈ ವೇಳೆ ವಿಕಾಸ್ನ ಫೋನ್ ಅನ್ನು ಪರಿಶೀಲಿಸಿದಾಗ ಅದರಲ್ಲಿ ಕೊಲೆ ಮಾಡುವುದು ಹೇಗೆ ಎನ್ನುವುದರ ಬಗ್ಗೆ ಗೂಗಲ್ನಲ್ಲಿ ಹುಡುಕಿರು ವುದಾಗಿ ಮಾಹಿತಿ ದೊರೆತಿದೆ. ಅಷ್ಟೇ ಅಲ್ಲದೇ ಇದರಿಂದಾಗಿಯೇ ಆನ್ಲೈನ್ನಲ್ಲಿ ವಿಷವನ್ನು ಖರೀದಿಸಲು ಪ್ರಯತ್ನಿಸಿದ್ದನು. ಅಷ್ಟೇ ಅಲ್ಲದೇ ಗನ್ ಅನ್ನು ಎಲ್ಲಿಂದ ಖರೀದಿಸಬಹುದು ಎನ್ನುವುದರ ಕುರಿತು ಗೂಗಲ್ನಲ್ಲಿ ಹುಡುಕಿದ್ದಾನೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ವಿಕಾಸ್ನನ್ನು ಬಂಧಿಸಲಾಗಿದೆ