ಕುಂದಾಪುರ ಕಾಳಾವಾರದಲ್ಲಿ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ ಬರ್ಬರ ಹತ್ಯೆ

ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಫೈನಾನ್ಶಿಯರ್. ಹಣಕಾಸು ವಿಚಾರದಲ್ಲಿ‌ ಈ ಕೊಲೆ ನಡೆದಿದೆ ಎನ್ನಲಾಗಿದೆ. ಅಜೇಂದ್ರ ಅವರು ಕಳೆದ 5 ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಪಾಲುದಾರಿಕೆಯೊಂದಿಗೆ ಡ್ರೀಮ್ ಫೈನಾನ್ಸ್ ಎನ್ನುವ ಫೈನಾನ್ಸ್ ಸಂಸ್ಥೆಯನ್ನು ನಡೆಸುತ್ತಿದ್ದರು. ಸಾಮಾಜಿಕ ಕಾರ್ಯಗಳಲ್ಲ ಕೂಡ ಅಜೇಂದ್ರ ತೊಡಗಿಸಿಕೊಂಡಿದ್ದರು.

ಅಜೇಂದ್ರ ಶೆಟ್ಟಿ ರಾತ್ರಿಯಾದರೂ ಮನೆಗೆ ಹಿಂತಿರುಗದ ಕಾರಣ ಮನೆಯವರು ಹಾಗೂ ಅವರ ಸ್ನೇಹಿತರು ಅವರಿಗಾಗಿ ಹುಡುಕಾಡತೊಡಗಿದ್ದಾರೆ. ಈ ವೇಳೆ ಸ್ನೇಹಿತರಿಗೆ ಫೈನಾನ್ಸ್ ಫೈನಾನ್ಸ್‌ ನಲ್ಲಿ ನೋಡುವಾಗ ಫೈನಾನ್ಸ್‌ ನ ರೂಮಿನಲ್ಲಿ ಅಜೇಂದ್ರ ಶೆಟ್ಟಿಯು ಕುಳಿತಲ್ಲಿಯೇ ವಾಲಿಕೊಂಡು ಬಿದ್ದಿದ್ದು, ಆತನ ಕೆನ್ನೆಯ ಬಳಿ ಕಡಿದ ಗಾಯವಾಗಿ ರಕ್ತ ಹರಿಯುತ್ತಿತ್ತು.

ಕೂಡಲೇ ಅವರು ಸ್ನೇಹಿತರೊಂದಿಗೆ ಸೇರಿ ಕಾರಿನಲ್ಲಿ ಅಜೇಂದ್ರನನ್ನು ಕೋಟೇಶ್ವರ ಎನ್.ಆರ್ ಆಚಾರ್ಯ ಆಸ್ವತ್ರೆಗೆ ಕರೆದುಕೊಂಡು ಹೋದರು. ವೈದ್ಯರು ಅಜೇಂದ್ರನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರು ತ್ತಾರೆ. ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ವಿಷ್ಣುವರ್ಧನ್, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply