ಪುತ್ತೂರು : ಚೂರಿಯಿಂದ ಇರಿದು ಯುವತಿಯ ಹತ್ಯೆ!

ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಹಾಡುಹಗಲೇ ಯುವತಿಯ ಮೇಲೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಯುವತಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ವಿಟ್ಲ ಸಮೀಪದ ಅಳಿಕೆ ನಿವಾಸಿ ಗೌರಿ (18) ಚೂರಿ ಇರಿತಕ್ಕೆ ಒಳಗಾದವರಾಗಿದ್ದು, ಗುರುವಾರ ಮಧ್ಯಾಹ್ನ(ಇಂದು) 2 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ, ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ, ಆರೋಪಿ ಪದ್ಮರಾಜ್ ಮಾರಕಾಯುಧದಿಂದ 3 ರಿಂದ ನಾಲ್ಕು ಬಾರಿ ಇರಿದಿದ್ದಾನೆ. ಅನಂತರ ಆರೋಪಿ ಪದ್ಮರಾಜ್ ಬೈಕನ್ನು ಘಟನಾ ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಹಾಗೂ ಮಹಿಳಾ ಪೊಲೀಸ್ ಠಾಣೆಯ ನಡುವಿನ ಜಾಗದಲ್ಲಿ ಈ ದಾಳಿ ನಡೆದಿದ್ದು, ಗೋಡೆಗೆ ಯುವತಿಯನ್ನು ಒತ್ತಿ ಹಿಡಿದು ದುಷ್ಕರ್ಮಿ ಕತ್ತು ಸೀಳಿರುವುದಾಗಿ ತಿಳಿದುಬಂದಿದೆ. ಸದ್ಯ, ಯುವತಿ ಗೌರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಒಂದೂವರೆ ಗಂಟೆಯೊಳಗಡೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಭೀರ ಗಾಯಗೊಂಡಿರುವ ಗೌರಿಯವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಅಂಬ್ಯುಲೆನ್ಸ್ ಮೂಲಕ ರವಾನಿಸುವ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಆರೋಪಿ ಪದ್ಮರಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮಾಹಿತಿ ನೀಡಿದ್ದಾರೆ.

ಗೌರಿ ಇತ್ತೀಚೆಗಷ್ಟೇ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದು, ಪುತ್ತೂರಿನ ಬಸ್‌ ನಿಲ್ದಾಣದ ಬಳಿ ಇರುವ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ. ಆರೋಪಿ ಈ ರೀತಿಯ ದುಷ್ಕೃತ್ಯ ಎಸಗಲು ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

 
 
 
 
 
 
 
 
 
 
 

Leave a Reply