ಪುತ್ತೂರು : ಕಲ್ಲೇಗ ಟೈಗರ್ಸ್ ಖ್ಯಾತಿಯ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ!

ಪುತ್ತೂರಿನ ಕಲ್ಲೇಗ ಟೈಗರ್ಸ್ ಖ್ಯಾತಿಯ ಅಕ್ಷಯ್ ಕಲ್ಲೇಗ (24) ಅವರನ್ನು ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದೆ. ಅಕ್ಷಯ್ ಕಳೆದ 6 ವರ್ಷಗಳಿಂದ ಕಲ್ಲೇಗ ಟೈಗರ್ಸ್ ಎಂಬ ಹುಲಿ ವೇಷ ತಂಡವನ್ನು ಮುನ್ನಡೆಸುತ್ತಿದ್ದರು. ಅಲ್ಲದೇ ಇವರ ತಂಡ ಬಿಗ್ ಬಾಸ್ ಶೋನಲ್ಲೂ ತನ್ನ ಹುಲಿ ಕುಣಿತ ಪ್ರದರ್ಶಿಸಿತ್ತು. ಅಲ್ಲದೇ ಈ ತಂಡ ಇತ್ತೀಚಿನ ದಿನಗಳಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿತ್ತು.

ನಿನ್ನೆ ಸಂಜೆ ವೇಳೆ ವಾಹನ ಅಪಘಾತದ ವಿಚಾರದಲ್ಲಿ ಅಕ್ಷಯ್ ಹಾಗೂ ಎದುರಾಳಿ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಇದರ ನಷ್ಟದ ಬಾಬು ಮಾತನಾಡಲೆಂದು ಪುನ: ಅದೇ ತಂಡ ಅಕ್ಷಯ್ ನನ್ನು ರಾತ್ರಿ ವೇಳೆ ನೆಹರೂ ನಗರ ಬಳಿ ಬರಲು ಹೇಳಿ ಹತ್ಯೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಕೇವಲ 2 ಸಾವಿರ ರೂಪಾಯಿಗಾಗಿ ಕೊಲೆ ನಡೆದಿದೆ ಎಂಬ ಮಾತು ಕೇಳಿ ಬಂದಿದೆ. ರಾತ್ರಿ 11.30 ಗಂಟೆ ಸುಮಾರಿಗೆ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ನೆಹರೂ ನಗರದಿಂದ ವಿವೇಕಾನಂದ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಹೆದ್ದಾರಿಯ ತುಸು ದೂರದಲ್ಲಿರುವ ಕೆನರಾ ಬ್ಯಾಂಕಿನ ಎಟಿಎಂ ಬಳಿ ಅಕ್ಷಯ್ ಮೇಲೆ ತಂಡ ದಾಳಿ ನಡೆಸಿದ್ದು, ಅಲ್ಲಿಂದ ಅವರನ್ನು ಅಟ್ಟಾಡಿಸಿಕೊಂಡು ಬಂದು ತಲಾವರಿನಿಂದ ದಾಳಿ ನಡೆಸಿದ್ದಾರೆ. ಎಟಿಎಂ ಬಳಿಯಿಂದ ಮಾಣಿ ಮೈಸೂರು ಹೆದ್ದಾರಿಯನ್ನು ದಾಟಿ ಆಚೆ ಬದಿ ಗಿಡಗಂಟಿಗಳಿಂದ ಅವೃತ್ತವಾದ ಜಾಗದವರೆಗೂ ಅಟ್ಟಾಡಿಸಿಕೊಂಡು ಹೋಗಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮಾಣಿ ಮೈಸೂರು ಹೆದ್ದಾರಿಯ ಒಂದು ಬದಿಯಿಂದ ಇನ್ನೊಂದು ಬದಿಯವರೆಗೆ ರಕ್ತದ ಕಲೆಗಳಿವೆ. ಅಕ್ಷಯ್ ಮೃತದೇಹ ಕಾಲೇಜಿಗೆ ಹೋಗುವ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಹೆದ್ದಾರಿಯ ಅಂಚಿನಲ್ಲಿರುವ ಹಡೀಲು ಬಿದ್ದ ಜಾಗದಲ್ಲಿ ಬಿದ್ದು ಕೊಂಡಿತ್ತು.

ಒಟ್ಟು ಮೂವರಿದ್ದ ತಂಡ ಕೃತ್ಯ ಎಸಗಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಈ ಪೈಕಿ ಇಬ್ಬರು ಆರೋಪಿಗಳಾದ ಮನೀಶ್ ಹಾಗೂ ಚೇತು ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. ಇನ್ನೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎನ್ನಲಾಗುತ್ತಿದೆ.

 
 
 
 
 
 
 
 
 
 
 

Leave a Reply