ರೇವಂತ್ ಅಲಿಯಾಸ್ ಸೃಷ್ಟಿ ಎಂಬಾತನಿಗೆ ಪಲ್ಸರ್ ಬೈಕಿನಲ್ಲಿ ಬಂದ ಯುವಕರ ಗುಂಪು ಚಾಕುವಿನಿಂದ ಚುಚ್ಚಿ ಪರಾರಿಯಾಗಿದೆ. ಯುವಕನಿಗೆ ನಡು ರಸ್ತೆಯಲ್ಲಿ ಚಾಕು ಹಿಡಿದು ಅಟ್ಟಹಾಸ ಮೆರೆದ ವೀಡಿಯೋ ಮೊಬೈಲ್ನಲ್ಲಿ ರೆಕಾರ್ಡ್ ಆಗಿದ್ದು, ಲೈವ್ ಮರ್ಡರ್ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಸ್ಥಳೀಯರು ಯವಕನನ್ನು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ರಸ್ತೆಯ ತುಂಬೆಲ್ಲಾ ರಕ್ತ ಹರಿದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ನೆಲಮಂಗಲ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದ್ದಾರೆ.
ಇತ್ತೀಚೆಗೆ ನೆಲಮಂಗಲದಲ್ಲಿ ಮತ್ತೆ ನೆತ್ತರಿನ ಪ್ರಕರಣಗಳು ಮರುಕಳಿಸುತ್ತಿದ್ದು, ಪೊಲೀಸ್ ಇಲಾಖೆ ಇನ್ನಷ್ಟು ಕ್ರಮಗಳನ್ನ ತೆಗೆದುಕೊಳ್ಳಬೇಕಿದೆ. ಪಡ್ಡೆ ಯುವಕರಿಗೆ ಕಡಿವಾಣಹಾಕಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ.