ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ!

ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ನಂತರ ಇದೀಗ ಬಜರಂಗ ಕಾರ್ಯಕರ್ತನ ಹತ್ಯೆಗೆ ಯತ್ನಿಸಲಾಗಿರುವ ಘಟನೆ ಶಿವಮೊಗ್ಗದ ಸಾಗರದಲ್ಲಿ ನಡೆದಿದೆ.

ಭಾನುವಾರ ಶೌರ್ಯ ಸಂಚಲನ ಯಾತ್ರೆ ನಡೆದಿತ್ತು. ಯಾತ್ರೆಯಲ್ಲಿ ಸುನೀಲ್ ಪಾಲ್ಗೊಂಡಿದ್ದರು. ಎಂದಿನಂತೆ ತಮ್ಮ ಕಚೇರಿಗೆ ಬೈಕ್ ನಲ್ಲಿ ಆಗಮಿಸುತ್ತಿದ್ದ ಸುನೀಲ್ ಮೇಲೆ ಸಮೀರ್ ಎಂಬಾತ ಏಕಾಏಕಿ ಮಚ್ಚಿನಿಂದ ಬೀಸಿದ್ದಾನೆ. ಅದೃಷ್ಟವಶಾತ್ ಎಚ್ಚೆತ್ತ ಸುನೀಲ್ ಮಚ್ಚಿನೇಟಿನಿಂದ ತಪ್ಪಿಸಿಕೊಂಡಿದ್ದಾರೆ. ಈ ಆಘಾತಕಾರಿ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇನ್ನು ಈ ಸಂಬಂಧ ಸುನೀಲ್ ಸಾಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ಸಮೀರ್ ನನ್ನು ಬಂಧಿಸುವಂತೆ ಬಜರಂಗ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೂದಲೆಳೆ ಅಂತರದಲ್ಲಿ ಸುನೀಲ್ ಪಾರಾಗಿದ್ದಾರೆ. ಘಟನೆ ಖಂಡಿಸಿ ಹಿಂದೂಪರ ಸಂಘಟನೆ ಸಾಗರದಲ್ಲಿ ಪ್ರತಿಭಟನಾ ಮೆರವಣಿಗೆ ಕೈಗೊಂಡಿದೆ. ನಾಳೆ (ಮಂಗಳವಾರ) ಸಾಗರ ನಗರ ಬಂದ್ ಗೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.

 
 
 
 
 
 
 
 
 
 
 

Leave a Reply