ಕಾವೂರು: ಉದ್ಯಮಿ ಹತ್ಯೆ

ಕಾವೂರು: ಕಾವೂರು ಮಲ್ಲಿ ಲೇಔಟ್ ನಿವಾಸಿಯಾಗಿರುವ ಸುರೇಂದ್ರನ್ (60) ಎಂಬವರನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ​. ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷದಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು.ಮಂಗಳವಾರ ಸುರೇಂದ್ರನ್ ನಗರಕ್ಕೆ ಹೋಗಿದ್ದರೆ ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರ ನೋಡಿಕೊಳ್ಳಲು ತೆರಳಿದ್ದರು.
ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ ಮರಳಿ ಬಂದಿದ್ದು , ಆ ಬಳಿಕ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ. ವ್ಯವಹಾರಕ್ಕೆ ಸಂಬಂಧಿಸಿ ಕೊಲೆ ನಡೆದಿರಬಹುದೇ ಎಂಬುದು ಪೋಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಾಗಿದೆ.​ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
​​
 
 
 
 
 
 
 
 
 
 
 

Leave a Reply