ನೀಟ್‌ ಪರೀಕ್ಷೆಯಲ್ಲಿ ಕಡಿಮೆ ಅಂಕ; ವಿದ್ಯಾರ್ಥಿ ಆತ್ಮಹತ್ಯೆ!

ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಸಂಗಮ್ ಸೇತುವೆಯಲ್ಲಿ ಸಂಭವಿಸಿದೆ.

ಸಾಯಿಷ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾಯೀಶ್ ಶೆಟ್ಟಿ ಶಿವಮೊಗ್ಗದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು ನೀಟ್ ಪರೀಕ್ಷೆ ಬರೆದಿದ್ದ. 630 ಅಂಕ ಪಡೆಯುವ ಭರವಸೆ ಇಟ್ಟುಕೊಂಡಿದ್ದ. ಅದರ ಫಲಿತಾಂಶಕ್ಕಾಗಿ ಕಾಯುತ್ತಿದ್ದ. ಇದೀಗ ಫಲಿತಾಂಶ ಬಂದಿದ್ದು, ಇಂದು ಬೆಳಿಗ್ಗೆ ಸೈಕಲ್ ತೆಗೆದುಕೊಂಡು ಸೈಬರ್ ಹೋಗಿ ಪರೀಕ್ಷಿಸಿದ್ದಾನೆ. ಆಗ 140 ಅಂಕ ಬಂದಿದ್ದು ತಿಳಿದು ಕಡಿಮೆ ಅಂಕ ಬಂತೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಹಂತದಲ್ಲಿ ತಿಳಿದುಬಂದಿದೆ.

ಸೇತುವೆ ಮೇಲೆ ಸೈಕಲ್ ಇಟ್ಟು ಪಂಚಗಂಗಾವಳಿ ನದಿಗೆ ಹಾರಿದ್ದಾನೆ. ನದಿಯಲ್ಲಿ ದೋಣಿ ಮೂಲಕ ಯುವಕನಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ.

 
 
 
 
 
 
 
 
 
 
 

Leave a Reply