ಫೋಟೋಗ್ರಾಫರ್​ ಮೇಲೆ ತಲವಾರು ಬೀಸಿದ ಮೂವರು ಆರೋಪಿಗಳು ಅಂದರ್ ​

ಮಂಗಳೂರು: ಫರಂಗಿಪೇಟೆಯಲ್ಲಿ ಬುಧವಾರ ರಾತ್ರಿ ಫೋಟೋಗ್ರಾಫರ್ ದಿನೇಶ್ ಕೊಲೆ ಯತ್ನ ಪ್ರಕರಣದ ಮೂವರು ಆರೋಪಿ ಗಳನ್ನು ​ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ​ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಅಮ್ಮೆಮಾರ್ ನಿವಾಸಿ ಮಹಮ್ಮದ್ ಅರ್ಷದ್,​ ​ಮಹಮ್ಮದ್ ಸೈಫುದ್ದೀನ್​ ಹಾಗು ​ಅಬ್ದುಲ್ ರೆಹಮಾನ್  ಬಂಧಿತರು.​ ​ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದಾನೆ.


ಬುಧವಾರ ರಾತ್ರಿ ಫರಂಗಿಪೇಟೆಯ ಸ್ಟುಡಿಯೋದೊಳಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರದಿಂದ ದಿನೇಶ್​ ಕೊಟ್ಟಿಂಜ​ ಅವರಿಗೆ ಗಂಭೀರ ಹಲ್ಲೆ ನಡೆಸಿದ್ದರು. ತಕ್ಷಣ ಕಾರ್ಯಾಚರಣೆ ನಡೆಸಿದ ಬಂಟ್ವಾಳ ಪಿಎಸ್ಐ ಪ್ರಸನ್ನ ನೇತೃತ್ವದ ತಂಡ ಆರೋಪಿಗಳ​​ನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ವಿವರ:  ದಿನಾಂಕ 28-10-2020 ರಂದು  ಸಮಯ ಸಂಜೆ 7-15 ಗಂಟೆಗೆ ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಫರಂಗಿಪೇಟೆಯಲ್ಲಿನ ದಿನೇಶ್ ರವರ ತೃಷಾ ಪೋಟೊ ಸ್ಟುಡಿಯೋಕ್ಕೆ 4 ಜನ ಯುವಕರು ಪೋಟೊ ತೆಗೆಸುವಂತೆ ಬಂದು, ಇತ್ತೀ ಚಗೆ ಕುಂಪನಮಜಲು ಎಂಬಲ್ಲಿ ಹೆಣ್ಣು ಮಗುವಿನ ಮೇಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ದಿನೇಶ್ ರವರು ಹೆಣ್ಣು ಮಗುವಿನ ಕಡೆಯವರಿಗೆ ಬೆಂಬಲ ನೀಡಿದ್ದ ದ್ವೇಷದಿಂದ, ಅದರಲ್ಲಿ ಒಬ್ಬನು ಕೊಲ್ಲುವ ಉದ್ದೇಶದಿಂದ  ಕತ್ತಿಯಿಂದ ತಲೆಗೆ, ಬಲ ಕೈಗೆ ಹಾಗೂ ಎಡ ಕಿಬ್ಬೊಟ್ಟೆಗೆ ಹಲ್ಲೆ ನಡೆಸಿ ತೀವ್ರ ಗಾಯವಾಗಿದ್ದು ,ಆ ವೇಳೆಯಲ್ಲಿ ಅಲ್ಲಿದ್ದ ಶೇಖರ ಪೂಜಾರಿ ರವರು ಹಲ್ಲೆಯಾಗುವುದನ್ನು ತಪ್ಪಿಸಲು ಅಲ್ಲೇ ಇದ್ದ ಚೇರ್ ನಿಂದ ಜೋರಾಗಿ ಇಬ್ಬರು ಆರೋಪಿಗಳಿಗೆ ಹೊಡೆದಿದ್ದು ಅವರ ಕೈಗೆ ಗಾಯವಾಗಿರುತ್ತದೆ, ನಂತರ ದಿನೇಶ್ ರವರನ್ನು ಚಿಕಿತ್ಸೆಗಾಗಿ ಮಂಗಳೂರಿನ A J ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿರುತ್ತದೆ 

ಕೂಡಲೇ ಆರೋಪಿಗಳಾದ   ಅಮ್ಮೆಮ್ಮಾರು ನಿವಾಸಿ ಮಹಮ್ಮದ್  ಅರ್ಷದ್(19),ಅಬ್ದುಲ್ ರೆಹಮಾನ್(22) ಮತ್ತು ಮಹ ಮ್ಮದ್ ಸೈಪುದ್ದೀನ್(22) ರವರನ್ನು  ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಪ್ರಸನ್ನ  ಹಾಗೂ ಸಿಬ್ಬಂದಿರವರು ದಸ್ತಗಿರಿ ಮಾಡಿರುತ್ತಾರೆ.​ ​ಮತ್ತೊಬ್ಬ ಆರೋಪಿ ಸವಾದ್ ನ ದಸ್ತಗಿರಿಗೆ  ವಿಶೇಷ ತಂಡವು ಶ್ರಮಿಸುತ್ತಿದೆ. ತನಿಖೆ ಮುಂದುವರೆದಿರುತ್ತದೆ.​​

 
 
 
 
 
 
 
 
 
 
 

Leave a Reply