ಮಂಗಳೂರು: ಫರಂಗಿಪೇಟೆಯಲ್ಲಿ ಬುಧವಾರ ರಾತ್ರಿ ಫೋಟೋಗ್ರಾಫರ್ ದಿನೇಶ್ ಕೊಲೆ ಯತ್ನ ಪ್ರಕರಣದ ಮೂವರು ಆರೋಪಿ ಗಳನ್ನು ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಅಮ್ಮೆಮಾರ್ ನಿವಾಸಿ ಮಹಮ್ಮದ್ ಅರ್ಷದ್, ಮಹಮ್ಮದ್ ಸೈಫುದ್ದೀನ್ ಹಾಗು ಅಬ್ದುಲ್ ರೆಹಮಾನ್ ಬಂಧಿತರು. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ಬುಧವಾರ ರಾತ್ರಿ ಫರಂಗಿಪೇಟೆಯ ಸ್ಟುಡಿಯೋದೊಳಗೆ ನುಗ್ಗಿದ ಆರೋಪಿಗಳು ಮಾರಕಾಸ್ತ್ರದಿಂದ ದಿನೇಶ್ ಕೊಟ್ಟಿಂಜ ಅವರಿಗೆ ಗಂಭೀರ ಹಲ್ಲೆ ನಡೆಸಿದ್ದರು. ತಕ್ಷಣ ಕಾರ್ಯಾಚರಣೆ ನಡೆಸಿದ ಬಂಟ್ವಾಳ ಪಿಎಸ್ಐ ಪ್ರಸನ್ನ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೂಡಲೇ ಆರೋಪಿಗಳಾದ ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19),ಅಬ್ದುಲ್ ರೆಹಮಾನ್(22) ಮತ್ತು ಮಹ ಮ್ಮದ್ ಸೈಪುದ್ದೀನ್(22) ರವರನ್ನು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ ರವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ ಪ್ರಸನ್ನ ಹಾಗೂ ಸಿಬ್ಬಂದಿರವರು ದಸ್ತಗಿರಿ ಮಾಡಿರುತ್ತಾರೆ. ಮತ್ತೊಬ್ಬ ಆರೋಪಿ ಸವಾದ್ ನ ದಸ್ತಗಿರಿಗೆ ವಿಶೇಷ ತಂಡವು ಶ್ರಮಿಸುತ್ತಿದೆ. ತನಿಖೆ ಮುಂದುವರೆದಿರುತ್ತದೆ.