ಮಣಿಪಾಲ : ವೇಶ್ಯಾವಾಟಿಕೆ ಅಡ್ಡೆಗೆ ದಾಳಿ; ಮೂವರು ವಶಕ್ಕೆ!

ಉಡುಪಿ: ಇಲ್ಲಿನ ಬೊಮ್ಮರಬೆಟ್ಟುವಿನ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪವನ್‌, ಚೇತನ್‌ ಸಿ.ಬಿ., ಪಂಜು ಪ್ರಕರಣದ ಆರೋಪಿಗಳು, ಹೆರ್ಗ ಗ್ರಾಮದ ಈಶ್ವರ ನಗರದ ರೆಸಿಡೆನ್ಸಿಯೊಂದರ ಸಮೀಪ ಓರ್ವ ವ್ಯಕ್ತಿ ಮಹಿಳೆಯರನ್ನು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣಾ ಪೊಲೀಸರು ಗುರುವಾರ ರಾತ್ರಿ ಸ್ಥಳಕ್ಕೆ ದಾಳಿ ಮಾಡಿ ಪವನ್‌ನನ್ನು ವಶಕ್ಕೆ ಪಡೆದುಕೊಂಡಿದ್ದರು.

ಬಳಿಕ ಈತ ನೀಡಿದ ಮಾಹಿತಿಯ ಆಧಾರದ ಮೇಲೆ ಉಡುಪಿ ಬೊಮ್ಮರಬೆಟ್ಟುವಿನಲ್ಲಿರುವ ಮನೆಯೊಂದಕ್ಕೆ ದಾಳಿ ಮಾಡಿದ ಪೊಲೀಸರು ಚೇತನ್‌ ಸಿ.ಬಿ. ಮತ್ತು ಪಂಜು ಎಂಬ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply