ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ ಈಗ ಎಲ್ಲೆಡೆ ಸದ್ದು ಮಾಡ್ತಿದೆ. ಈ ಬೆನ್ನಲ್ಲೇ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಅಂಟಿಸಿದ್ದ ಕಾಂತಾರ ಚಿತ್ರದ ಪೋಸ್ಟರ್ ಮೇಲೆ, ಕಿಡಿಗೇಡಿಗಳು ಅವಹೇಳನಹಾರಿ ಬರಹ ಬರೆದಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಜಯನಗರ ಪೊಲೀಸರು ಸ್ಥಳಕ್ಕೆ ಧಾವಿಸಿ, ಪೋಸ್ಟರ್ ತೆರವು ಮಾಡಿದ್ದಾರೆ. ಬರಹ ಖಂಡಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ಮಾಡಿ, ಈ ಕೂಡಲೇ ಕಿಡಿಗೇಡಿಳನ್ನ ಬಂಧನ ಮಾಡುವಂತೆ ಆಗ್ರಹ ಮಾಡಿದ್ದಾರೆ. ದುಷ್ಕರ್ಮಿಗಳನ್ನ ಬಂಧಿಸದಿದ್ರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.