ಪುಣೆ : ಮಹರಾಷ್ಟ್ರ ಪುಣೆಯ ಬಳಿ ಲೊನವಾಲದ ಶಿವಸೇನೆಯ ಮುಖಂಡನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.ಮಾಜಿ ಶಿವಸೇನಾ ಮುಖಂಡ ಉಮೇಶ್ ಶೆಟ್ಟಿಯವರ ಪುತ್ರ ರಾಹುಲ್ ಶೆಟ್ಟಿ ಕೊಲೆಯಾದವರು ಎಂದು ತಿಳಿದು ಬಂದಿದೆ.
ಮೂಲತಃ ಮಂಗಳೂರಿನವರಾದ ರಾಹುಲ್ ಶೆಟ್ಟಿಯನ್ನು ದುಷ್ಕರ್ಮಿಗಳು ಮೂರು ಬಾರಿ ಗುಂಡು ಹಾರಿಸಿ ಕೊಲೆ ಮಾಡಿ ದ್ದಾರೆ ಎನ್ನಲಾಗಿದೆ. ರಾಹುಲ್ ಶೆಟ್ಟಿ ಶಿವಸೇನಾ ಅಧ್ಯಕ್ಷರಾಗಿದ್ದರು. ಗುಂಡಿನ ದಾಳಿಯಾಗಿ ಆಸ್ಪತ್ರೆಗೆ ದಾಖಲಾ ಗಿದ್ದಾರೆ. ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಮೂಲಗಳಿಂದ ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ಕಾರಣ ತಿಳಿದು ಬರಬೇಕಿದೆ. ನಿನ್ನೆ ಅದೇ ಪರಿಸರದಲ್ಲಿ ಗಣೇಶ್ ನಾಯ್ಡ ಎಂಬವರ ಕೊಲೆಯಾಗಿತ್ತು. ಇಂದು ರಾಹುಲ್ ಶೆಟ್ಟಿ ಕೊಲೆಯಾಗಿದೆ. ಹತ್ಯೆ ನಡೆದ ಸ್ಥಳದಲ್ಲಿ ಪೊಲೀಸರಿಗೆ ಸಿಸಿ ಕ್ಯಾಮರಾದ ದೃಶ್ಯಗಳು ಲಭ್ಯವಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ