ಖೋಟಾನೋಟು ಕೇಸಲ್ಲಿ ಸಬ್​ ಇನ್​ಸ್ಪೆಕ್ಟರ್​ ಮಹಮ್ಮದ್ ಇಮ್ರಾನ್ ಅಲಿ ಅಮಾನತು

ಬೆಂಗಳೂರು: ಖೋಟಾನೋಟು ಪ್ರಕರಣದಲ್ಲಿ ಐದು ಲಕ್ಷ ರೂಪಾಯಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಸಬ್​ ಇನ್​ಸ್ಪೆಕ್ಟರ್​ ಅಮಾನತುಗೊಂಡಿದ್ದಾರೆ. ಆರೋಪಿ ಎಸ್​ಐಯನ್ನು ಬೆಂಗಳೂರಿನ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಶರಣಪ್ಪ ಅಮಾನತುಗೊಳಿಸಿದ್ದಾರೆ.

ಬೆಂಗಳೂರಿನ ಗೋವಿಂದಪುರ ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹಮ್ಮದ್ ಇಮ್ರಾನ್​ ಅಲಿ ಅಮಾನತುಗೊಂಡಿರುವ ವ್ಯಕ್ತಿ. ಖೋಟಾನೋಟು ಪ್ರಕರಣವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಇವರ ಮೇಲಿದೆ.

ಖೋಟಾನೋಟು ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಆರೋಪಿಗಳಿಗೆ ಅನುಕೂಲ ಮಾಡಿಕೊಡಲು ಇಮ್ರಾನ್​ ಅಲಿ ಐದು ಲಕ್ಷ ರೂಪಾಯಿ ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದ. ಇದು ಬೆಳಕಿಗೆ ಬರುತ್ತಿದ್ದ ಎಸಿಪಿಯೊಬ್ಬರಿಂದ ತನಿಖೆ ನಡೆಸಲಾಗಿದೆ. ಆಗ ಪಿಎಸ್​ಐ ಲಂಚ ಪಡೆದಿರುವುದು ತನಿಖೆಯಲ್ಲಿ ಸಾಬೀತುಗೊಂಡಿದೆ. ಈ ಹಿನ್ನೆಲೆಯಲ್ಲಿ ಇಮ್ರಾನ್​ ಅಲಿಯನ್ನು ಅಮಾನತು ಗೊಳಿಸಲಾಗಿದೆ.

 
 
 
 
 
 
 
 
 
 
 

Leave a Reply