ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲಕ​ನ ಕೊಲೆ ಯತ್ನ ​

​ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಘಟನೆ​. ಅಪರಿಚಿತ ವ್ಯಕ್ತಿಗಳಿಂದ​  ಫರಂಗಿಪೇಟೆಯಲ್ಲಿರುವ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಮೇಲೆ  ತಲವಾರು ದಾಳಿ​. ಗಾಯಗೊಂಡ ದಿನೇಶ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು​. ​ಸ್ಥಳಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ವೆಲೆಂಟೈನ್ ಡಿ.ಸೋಜ ವೃತ್ತ ನಿರೀಕ್ಷಕ ಟಿ‌.ಡಿ.ನಾಗರಾಜ್ , ಎಸ್. ಐ.ಪ್ರಸನ್ನ ಭೇಟಿಬಂಟ್ವಾಳ ‌ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ​​. 
​​
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಷಿಯೇಶನ್ ಬಂಟ್ವಾಳ ವಲಯದ ಸಕ್ರೀಯಸದಸ್ಯ  ಫರಂಗಿಪೇಟೆಯಲ್ಲಿರುವ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ  ಇವರ ಫೋಟೋ ಸ್ಟುಡಿಯೋಗೆ ನುಗ್ಗಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ದುಷ್ಕರ್ಮಿಗಳ ಈ ಕೃತ್ಯವನ್ನು ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಸಮಸ್ತ ಛಾಯಾಗ್ರಾಹಕರು ಒಕ್ಕೊರೊಲಿನಿಂದ ಖಂಡಿಸಿರು​ತ್ತಾರೆ.  
​ಖಂಡನೆ: ​ಅತೀ ಶೀಘ್ರವಾಗಿ  ಈ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಿ ತನಿಖೆ  ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗು ಪೊಲೀಸ್ ಇಲಾಖೆಗೆ ಮನವಿ ಮಾಡುತ್ತಿದ್ದೇವೆ. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗು ವುದು ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಷಿಯೇಶನ್ ಜಿಲ್ಲಾಧ್ಯಕ್ಷ ಕರಂದಾಡಿ ಶ್ರೀಧರ್ ಶೆಟ್ಟಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply