ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿ ಆತ್ಮಹತ್ಯೆ!

ಖಾಸಗಿ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರೂಪ (34) ಅರ್ಜುನ್ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು. ಅರ್ಜುನ್ ಕೂಡ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ರೂಪ ರವರಿಗೆ ಮದುವೆಯ ನಂತರ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎನ್ನಲಾಗುತ್ತಿದೆ.

ಈಗಾಗಲೇ ಹಲವು ಬಾರಿ ವರದಕ್ಷಿಣೆ ಹಣವನ್ನು ತಂದು ಕೊಟ್ಟಿದ್ದು, ಕಿರುಕುಳ ತಪ್ಪದ ಹಿನ್ನೆಲೆ ರೂಪ ಶಾಲಾ ಕೊಠಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನೆಯ ಕುರಿತು ಅರ್ಜುನ್, ಅತ್ತೆ ಅಂಬಿಕಾ , ನಾದಿನಿ ಸಂಗೀತ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ವರದಕ್ಷಿಣೆ ಕಿರುಕುಳ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ರೂಪ ವರದಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಮೃತ ಶಿಕ್ಷಕಿಯ ತವರು ಮನೆಯವರು ಆರೋಪ ಮಾಡಿದ್ದಾರೆ.

 
 
 
 
 
 
 
 
 
 
 

Leave a Reply