ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಘಟನೆ ಚಿತ್ರದುರ್ಗ ತಾಲೂಕಿನ ಬೊಗಳೇರಹಟ್ಟಿಯಲ್ಲಿ ನಡೆದಿದೆ.
 
ಗೂಳಯ್ಯನಹಟ್ಟಿಯ ಗೌತಮಿ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಖಾಸಗಿ ವಾಹನ ಚಾಲಕ ಚಂದ್ರಶೇಖರ್ ಮೂರು ವರ್ಷಗಳ ಹಿಂದೆ ಗೌತಮಿಯ ಜೊತೆ ಮದುವೆಯಾಗಿದ್ದನು. ದಂಪತಿಗೆ ಒಂದು ಮಗು ಸಹ ಇತ್ತು. ಇನ್ನು ಬರು ಬರುತ್ತಾ ಚಂದ್ರಶೇಖರ್ ವರದಕ್ಷಿಣೆ ಕಿರುಕುಳ ನೀಡಲು ಆರಂಭಿಸಿದ್ದಾನೆ ಹಾಗೂ ಈತನ ವಿರುದ್ಧ ಕೊಲೆ ಮಾಡಿದ ಆರೋಪ ಕೇಳಿಬಂದಿದೆ. 
 
ಚಂದ್ರಶೇಖರ್ ಮಾರಕಾಸ್ತ್ರಗಳಿಂದ ಪತ್ನಿಯನ್ನು ಕೊಲೆ ಮಾಡಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು 
ಬಿಂಬಿಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.
 
ಆಕ್ರೋಶಗೊಂಡ ಮೃತಳ ಸಂಬಂಧಿಕರು ಚಿತ್ರದುರ್ಗ ಎಸ್ಪಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಪೊಲೀಸರು ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಮೃತಳ ಸಂಬಂಧಿಕರು ಪ್ರತಿಭಟನೆ ಹಿಂಪಡೆದರು ಎನ್ನಲಾಗಿದೆ.
 
 
 
 
 
 
 
 
 
 
 

Leave a Reply