ಸಾಲ ಬಾಧೆ ಹಾಗೂ ಅನಾರೋಗ್ಯದ ಕಾರಣ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಉಡುಪಿಯ ಕೊರಂಗ್ರಪಾಡಿ ಗ್ರಾಮದ ಧೀರಜ್ (32) ಆತ್ಮಹತ್ಯೆ ಮಾಡಿಕೊಂಡವರು. ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಇವರು ಇತ್ತೀಚೆಗೆ ಸರಿಯಾದ ಕೆಲಸ ಇಲ್ಲದೆ ಇರುವ ಕಾರಣದಿಂದ ಕುಡಿತದ ಅಭ್ಯಾಸವನ್ನೂ ಹೊಂದಿದ್ದರು. ಸಾಲ ಕೂಡ ಮಾಡಿಕೊಂಡಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ರಾತ್ರಿಯಿಂದ ಇಂದು ಬೆಳಿಗ್ಗಿನ ಅವಧಿಯಲ್ಲಿ ಉಡುಪಿಯ ಕೊರಂಗ್ರಪಾಡಿ ಎಂಬಲ್ಲಿರುವ ತನ್ನ ವಾಸ್ತವ್ಯದ ಮನೆಯ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಪತ್ನಿ ಪ್ರಮೀಳಾ ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.