ಮಂಗಳೂರು: ಪಾಕೆಟ್ ಮನಿ ಕೊಡಲಿಲ್ಲವೆಂದು ಯುವಕ ಆತ್ಮಹತ್ಯೆ!

ಡಿಪ್ಲೊಮಾ ವಿದ್ಯಾರ್ಥಿಯೊಬ್ಬ ಕಾಲೇಜಿಗೆ ಸೇರಿದ ಮೊದಲ ದಿನವೇ ಮನೆಯವರು ಖರ್ಚಿಗೆ ಕಾಸು ಕೊಟ್ಟಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುತ್ತಾರ್ ಸುಭಾಷನಗರದಲ್ಲಿ ನಡೆದಿದೆ.

ಮಂಗಳೂರು ಕೆಪಿಟಿ ಪ್ರಥಮ ವರ್ಷದ ಮೆಕ್ಯಾನಿಕಲ್ ಡಿಪ್ಲೊಮಾ ವಿದ್ಯಾರ್ಥಿ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ಬಾಲಕ. ಈತ ಮಂಗಳುರು ನಗರದ ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬವರ ಪುತ್ರ.

ಮಂಗಳೂರಿನ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡಿದ ಈತ ಬಳಿಕ ಮೆಕ್ಯಾನಿಕಲ್ ಡಿಪ್ಲೊಮಾ ಕೋರ್ಸ್ ಮಾಡುವ ಉದ್ದೇಶದಿಂದ ಕರ್ನಾಟಕ ಪಾಲಿಟೆಕ್ನಿಕ್ ಗೆ ಸೇರಿದ್ದ. ಆ 2 ರಂದು ಕೋರ್ಸ್ ನ ಮೊದಲ ಕ್ಲಾಸ್ ಅಟೆಂಡ್ ಆಗಿದ್ದ. ಅವತ್ತು ಮನೆಯವರು ಖರ್ಚಿಗೆಂದು ರೂ500 ಕೊಟ್ಟಿದ್ದರು. ಮರು ದಿನ ಕೂಡ ಮನೆಯವರಬಳಿ ಖರ್ಚಿಗೆಂದು 500 ರೂಪಾಯಿ ಕೇಳಿದ್ದು, ಪೋಷಕರು ಕೊಡಲು ನಿರಾಕರಿಸಿದರು.

ಇದರಿಂದ ಕೋಪದಲ್ಲಿ ಮನೆಯಲ್ಲೇ ಉಳಿದುಕೊಂಡ ಸುಶಾಂತ್ ತಂದೆ ಮನೆ ಹೊರಗಡೆ ಹಾಗೂ ತಾಯಿ ಅಡುಗೆ ಕೋಣೆಯಲ್ಲೇ ಇದ್ದ ಸಂದರ್ಭ ಕೋಣೆಯೊಳಗೆ ಮನೆಯ ಪಕ್ಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 
 
 
 
 
 
 
 
 
 
 

Leave a Reply