ನೀಲಾವರ -ಪ್ರಿಯತಮೆಯ ಸಾವಿನಿಂದ ಮನನೊಂದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ!

ಪ್ರಿಯತಮೆಯ ಸಾವಿನಿಂದ ಮನನೊಂದು ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ನೀಲಾವರ ಗ್ರಾಮದ ಬಾವಲಿ ಕುದ್ರು ಎಂಬಲ್ಲಿ ನಡೆದಿದೆ.ಸ್ಥಳೀಯ ನಿವಾಸಿ ಸುಜಿತ್ ಡೇವಿಡ್ ಡಿಸೋಜ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಇವರು ಸಂತೆಕಟ್ಟೆಯ ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದರು. ತಾವು ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟ ಕಾರಣಕ್ಕೆ ಮಾನಸಿಕವಾಗಿ ನೊಂದಿದ್ದ ಇವರು ಇದೇ ಕಾರಣಕ್ಕೆ ಮನನೊಂದು ಇಂದು ಬೆಳಿಗ್ಗಿನಿಂದ ಮಧ್ಯಾಹ್ನದ ಮಧ್ಯಾವಧಿಯಲ್ಲಿ ಮನೆಯಲ್ಲಿ ನೇಣುಬಿಗಿದುಕೊಂಡುಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಮೃತರ ತಾಯಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply