ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ!

ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ. 42 ವರ್ಷದ ಅರವಿಂದ್ ಆತ್ಮಹತ್ಯೆ ಶರಣಾಗಿರುವ ಪತಿ. ತೋಟದ ಬಾವಿಗೆ ಹಾರಿ ಅರವಿಂದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅರವಿಂದ್ ಡೆತ್ ನೋಟಿನಲ್ಲಿ ಪತ್ನಿ ಹಾಗೂ ಪೊಲೀಸ್ ಠಾಣಾಧಿಕಾರಿ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. 12 ವರ್ಷದ ಹಿಂದೆ ರೇಖಾ ಎಂಬುವರೊಂದಿಗೆ ಅರವಿಂದ್ ಮದುವೆಯಾಗಿದ್ದರು. ಹೆಂಡತಿ ಕಿರುಕುಳದಿಂದಲೇ ಆತ್ನಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ನೋಟ್‌ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 
 
 
 
 
 
 
 
 
 
 

Leave a Reply