ಬೆಂಗಳೂರು : ಉಡುಪಿ ಮೂಲದ ತಾಯಿ, ಮಕ್ಕಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಇಂದು ನಡೆದಿದೆ. ಈ ಘಟನೆ ಜೆಪಿ ನಗರದಲ್ಲಿ ಮೂರನೇ ಹಂತದಲ್ಲಿ ನಡೆದಿದೆ.  ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್‌, ನಿಶಿತ್‌ (28) ಮೃತರು.

ಉಡುಪಿ ಜಿಲ್ಲೆಯ ಅಂಬಲಪಾಡಿ ಮೂಲದವರಾದ ಈ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು. ಸುಕನ್ಯಾ ಪತಿ ಜಯಾನಂದ್‌ ಫ್ಯಾಕ್ಟರಿ ನಡೆಸುತ್ತಿದ್ದರು. ಕೋವಿಡ್‌ನಿಂದ ನಷ್ಟ ಅನುಭವಿಸಿದ್ದ ಹಿನ್ನೆಲೆಯಲ್ಲಿ ಜಯಾನಂದ್‌ ಫ್ಯಾಕ್ಟರಿ ಬಂದ್‌ ಮಾಡಿದ್ದರು. ಜಯಾನಂದ್‌ ಸಾಕಷ್ಟು ಸಾಲ ಮಾಡಿದ್ದರಿಂದ ಸುಕನ್ಯಾ ಮನೆಯಲ್ಲಿ ಟ್ಯೂಷನ್‌ ಹೇಳಿಕೊಡುತ್ತಿದ್ದರು.

ವ್ಯವಹಾರ ನಷ್ಟವಾಗಿದ್ದರಿಂದ ಜಯಾನಂದ್‌ ಆನಾರೋಗ್ಯ ಪೀಡಿತರಾಗಿ ಮನೆಯಲ್ಲಿದ್ದರು. ಇಬ್ಬರು ಮಕ್ಕಳಲ್ಲಿ ಓರ್ವ ಮಗ ನಿಶ್ಚಿತ್ ಮನೆಯಿಂದಲೇ ವರ್ಕ್ ಫ್ರಮ್ ಹೋಂ ಮಾಡುತ್ತಿದ್ದ.

ನಿಕಿತ್ ಕಳೆದ ನಾಲ್ಕೈದು ತಿಂಗಳಿಂದ ಕೆಲಸ ಬಿಟ್ಟು ಮನೆಯಲ್ಲಿದ್ದ. ಸಾಲ ಜಾಸ್ತಿಯಾದ ಹಿನ್ನೆಲೆಯಲ್ಲಿ ಮನೆಗೆ ಸಾಲಗಾರರು ಬರುತ್ತಿದ್ದರು. ಹದಿನೈದು ವರ್ಷಗಳಿಂದ ಒಂದೇ ಮನೆಯಲ್ಲಿ ಕುಟುಂಬ ಬಾಡಿಗೆಗೆ ಇತ್ತು. ಕಳೆದ ಕೆಲ ತಿಂಗಳಿನಿಂದ ಬಾಡಿಗೆ ಕಟ್ಟಲು ಕುಟುಂಬ ಒದ್ದಾಡುತ್ತಿತ್ತು. ನಿನ್ನೆ ಸಂಜೆ ಬ್ಯಾಂಕ್‌ ಸಿಬ್ಬಂದಿಗಳು ಮನೆಗೆ ಆಗಮಿಸಿ ಸಾಲದ ಹಣ ವಾಪಾಸು ಕೇಳಿದ್ದರು. ಇವರು ಬರುವಾಗ ಗಂಡ ಮನೆಯಲ್ಲಿ ಇರಲಿಲ್ಲ.

ಬ್ಯಾಂಕ್‌ ಸಿಬ್ಬಂದಿಗಳ ಟಾರ್ಚರ್‌ಗೆ, ಮರ್ಯಾದೆಗೆ ಅಂಜಿ ಸುಕನ್ಯ ಬೆಳಗ್ಗೆ ಗಂಡನಿಗೆ ಹಾಲು ಹಾಗೂ ಪೇಪರ್ ನೀಡಿ ರೂಂ ಲಾಕ್‌ ಮಾಡಿ ಬೆಂಕಿ ಹಚ್ಚಿಕೊಂಡು ಮಕ್ಕಳ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 
 
 
 
 
 
 
 
 
 
 

Leave a Reply