ಅತಿಥಿ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ!

ಅವಿವಾಹಿತ ಅತಿಥಿ ಉಪನ್ಯಾಸಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಹಾಸನದಲ್ಲಿ ನಡೆದಿದೆ.

ಚನ್ನರಾಯಪಟ್ಟಣದ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿ ದೀಪಾ (34) ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿ ಆಗಿದ್ದಾಳೆ. ಹಾಸನದಲ್ಲಿ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಳು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ದೀಪಾಗೆ 34 ವರ್ಷವಾಗಿದ್ದರೂ ಮದುವೆ ಮಾಡಿಕೊಂಡಿರಲಿಲ್ಲ. ಇದೇ ವಿಚಾರಕ್ಕೆ ಧುಡುಕಿನ ನಿರ್ಧಾರ ಕೈಗೊಂಡಿದ್ದಾರಾ ಎಂಬ ನಿಟ್ಟಿನಲ್ಲಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ತನಿಖೆ ನಂತರವೇ ಮಾಹಿತಿ ತಿಳಿದುಬರಬೇಕಿದೆ.

 
 
 
 
 
 
 
 
 
 
 

Leave a Reply