ಸಾಲದ ಹೊರೆಗೆ ಬೇಸತ್ತು ಮಾನಸಿಕ ಖಿನ್ನತೆಗೊಳಗಾಗಿದ್ದ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೊಡವೂರು ಕಾನಂಗಿ ನಿವಾಸಿ, ವಿವಾಹಿತೆ ಬೀನಾರಾಣಿ (34) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ 4 ವರ್ಷಗಳಿಂದ ಶಿರ್ವದ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಅವರ ಪತಿ 9 ತಿಂಗಳ ಹಿಂದೆ ಸಾಲಭಾದೆಯಿಂದ ಗುಂಡಿಬೈಲಿನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದರು. ಪತಿ ಮಾಡಿದ ಸಾಲ ಇವರ ಮೇಲಿದ್ದು ಬರುತ್ತಿರುವ ಸಂಬಳದಲ್ಲಿ ಸಾಲ ತೀರಿಸಲಾಗದೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.