ಬಂಟ್ವಾಳ ಸುರೇಂದ್ರ ಭಂಡಾರಿ ಹತ್ಯೆಗೈದ 9 ಮಂದಿ ಆರೋಪಿಗಳ ಬಂಧನ

ಬಂಟ್ವಾಳ: ಚಿತ್ರನಟ ಸುರೇಂದ್ರ ಭಂಡಾರಿಯನ್ನು ಅ.20ರಂದು ಅವರ ಮನೆಯಲ್ಲೇ ಬರ್ಬರ ಹತ್ಯೆಗೀಡಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಈ ಕುರಿತು ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದು.
ಬಂಟ್ವಾಳದ ಅಜೆಕಲ ನಿವಾಸಿ ಸತೀಶ್ ಕುಲಾಲ್ (39), ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್ ಯಾನೆ ಗಿರಿ( 28), ಬಂಟ್ವಾಳ ಕಬ್ಬಿನಹಿತ್ಲು ನಿವಾಸಿ ಪ್ರದೀಪ್ ಕುಮಾರ್ ಯಾನೆ ಪಪ್ಪು(36) ಶರಣ್ ಯಾನೆ ಆಕಾಶ್‌ಭವನ ಶರಣ್ ( 35).

ವಸತಿ ಸಂಕೀರ್ಣದ ಪಾಲುದಾರ ವೆಂಕಪ್ಪ ಪೂಜಾರಿ ಯಾನೆ ವೆಂಕಟೇಶ (42), ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ರಾಜೇಶ್( 33), ದಿವ್ಯರಾಜ್( 30), ಬಂಟ್ವಾಳ ಮಂಡಾಡಿ ನಿವಾಸಿ ಶರೀಪ್ ಯಾನೆ ಸಯ್ಯದ್ ಶರೀಪ್ (34), ಅನಿಲ್ ಪಂಪ್‌ವೆಲ್ (35) ಬಂಧಿತ ಆರೋಪಿಗಳು.

 
 
 
 
 
 
 
 
 
 
 

Leave a Reply