ಉಡುಪಿ : ರೈಲ್ವೇ ನಿಲ್ದಾಣದಲ್ಲಿ ನಡೆದ ಕಳ್ಳತನ ಪ್ರಕರಣ\ ಖಾಕಿ ಪಡೆಯ ಮಿಂಚಿನ ಕಾರ್ಯಾಚರಣೆ

ದಿನಾಂಕ 14.03.2023 ರಂದು ಪುನೀತ್ ವಸಂತ್ ಹೆಗ್ಡೆ ಕುಟುಂಬದೊಂದಿಗೆ ಮುಂಬಿಯಿಗೆ ಹೋಗಲು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ನಂಬ್ರ 12134 ರಲ್ಲಿ S -3 ಕೋಚ್ ನಲ್ಲಿ ಸೀಟ್ ನಂಬ್ರ 33, 36 ಮತ್ತು 21 ನೇ ಟಿಕೆಟ್ ಬುಕ್ ಮಾಡಿದ್ದು, ಅದರಂತೆ ಮಧ್ಯಾಹ್ನ 03:35 ಗಂಟೆಗೆ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತಿದ್ದು, ಪಿರ್ಯಾದಿದಾರರು ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ  ಹಾಕಿ ಬಟ್ಟೆಗಳ ಮಧ್ಯೆ ಇಟ್ಟಿದ್ದು ಬ್ಯಾಗನ್ನು ಹೆಗಲಿನಲ್ಲಿ ಹಾಕಿಕೊಂಡಿದ್ದು, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲು ಹೊರಟಿದ್ದು ಸೀಟ್ ನಲ್ಲಿ ಕುಳಿತಾಗ ಪಿರ್ಯಾದಿದಾರರ ವ್ಯಾನಿಟಿ ಬ್ಯಾಗ್ ಜಿಪ್  ತೆರೆದಿರುವುದು ಕಂಡು ಬಂದಿದ್ದು, ಬ್ಯಾಗ್ ಪರಿಶೀಲಿಸಿದಾಗ ಬ್ಯಾಗ್ ನ ಓಳಗೆ ಇಟ್ಟಿದ್ದ ಬಂಗಾರದ ಒಡೆವೆಗಳ ಕವರ್ ಕಾಣಿಯಾಗಿರುತ್ತದೆ, ಪಿರ್ಯಾದಿದಾರರು ದಿನಾಂಕ: 14.03.2023 ರಂದು ಮಧ್ಯಾಹ್ನ 03:35 ಗಂಟೆಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಮಯ ಯಾರೋ ಕಳ್ಳರು ಪಿರ್ಯಾದಿದಾರರ ವ್ಯಾನಿಟಿ ಬ್ಯಾಗ್ ಜಿಪ್‌ ನ್ನು ತೆರೆದು ಬ್ಯಾಗ್ ನಲ್ಲಿದ್ದ  ಬಂಗಾರದ ಒಡವೆಗಳನ್ನು ಹಾಗೂ ವ್ಯಾಚ್ ನ್ನು ಕಳವು ಮಾಡಿರುವುದಾಗಿದೆ, ಕಳುವಾದ ಚಿನ್ನಾಭರಣಗಳ ಅಂದಾಜು ತೂಕ 100 ಗ್ರಾಂ  ಆಗಿದ್ದು, ಅಂದಾಜು ಮೌಲ್ಯ ಸುಮಾರು 4,00,000/- ಆಗಿರುತ್ತದೆ, ಹಾಗೂ ಕಳುವಾದ ವ್ಯಾಚ್ ನ ಅಂದಾಜು ಬೆಲೆ 3000/-  ಆಗಿರುತ್ತದೆ, ಕಳುವಾದ ಸ್ವತ್ತುಗಳ ಒಟ್ಟು ಮೌಲ್ಯ 4,03,000/- ರೂ ಎಂಬಿತ್ಯಾದಿಯಾಗಿರುತ್ತದೆ. ಈ ಬಗ್ಗೆ  ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 52/2023 ಕಲಂ: 379 ಐಸಿಯಂತೆ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿರುತ್ತದೆ.

ಈ ಪ್ರಕರಣ ದಾಖಲಾದ ತಕ್ಷಣ ಪ್ರಕರಣದಲ್ಲಿ ಆರೋಪಿಯ  ಪತ್ತೆ ಬಗ್ಗೆ  ಮಣಿಪಾಲ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕರ ನೇತೃತ್ವದಲ್ಲಿ ಪಿಎಸ್‌ಐ ನವೀನ್‌ ನಾಯ್ಕ ಎ.ಎಸ್‌.ಐ ಶೈಲೇಶ್‌ , ಹೆಚ್ ಸಿ  ಇಮ್ರಾನ್‌, ಶುಭ , ಅರುಣಾ ಚಾಳೇಕರ್ ತಂಡ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೇ ಪೊಲೀಸರ ಸಹಕಾರದೊಂದಿಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರೀಶೀಲಿಸಿ ಆರೋಪಿಗಳ ಮಾಹಿತಿ ಪಡೆದು ಅದರ ಆಧಾರದ ಮೇಲೆ ತಕ್ಷಣ ಕಾರ್ಯಾಚರಣೆ ನಡೆಸಿ ಘಟನೆ ನಡೆದ 8 ಗಂಟೆಗಳ ಒಳಗೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವೀಯಾಗಿರುತ್ತಾರೆ.

ಪ್ರಕರಣ ಆರೋಪಿಗಳಾದ ಲಲಿತಾ ಬೋವಿ, ಶಿವಮೊಗ್ಗ ಹಾಗು ಸುಶೀಲಮ್ಮ ಬೋವಿ, ಭದ್ರಾವತಿ ಎಂಬುವವರನ್ನು ಬೆಳಿಗ್ಗೆ 6:30 ಗಂಟೆಗೆ ಟೈಗರ್ ಸರ್ಕಲ್‌ ಬಳಿ ಬಸ್ಸಿಗಾಗಿ ಕಾಯುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಆರೋಪಿತರಿಂದ ಕಳುವಾದ 4,03,000/- ರೂ ಮೌಲ್ಯದ 100 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿ ಯಾಗಿದ್ದಾರೆ.

ಸದರಿ ಆರೋಪಿತರು ಭದ್ರಾವತಿ ಮೂಲದ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುವುದು , ಪಿಕ್‌ ಪಾಕೇಟ್‌ ಹಾಗೂ ಜನಸಂದಣಿಯಲ್ಲಿ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುವ ಚಾಳಿ ಉಳ್ಳವರಾಗಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಇವರ ವಿರುದ್ಧ ಈ ಹಿಂದೆ ದಾವಣಗೆರೆ ಜಿಲ್ಲೆ ಯ ಹೊನ್ನಾಳಿ ಪೊಲೀಸ್‌ ಠಾಣೆ ಸೇರಿದಂತೆ ರಾಜ್ಯದ ಇತರೆ ಕಡೆಗಳಲ್ಲಿ ಪ್ರಕರಣ ದಾಖಲಾಗಿರುವುದು ಕಂಡು ಬಂದಿರುತ್ತದೆ. ಆರೋಪಿತರನ್ನು ದಸ್ತಗಿರಿ ಮಾಡಿ ಬಂಗಾರದ  ಆಭರಣಗಳನ್ನು ವಶಪಡಿಸಿಕೊಂಡು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸದರಿ ಪ್ರಕರಣವನ್ನು ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಭೇಧಿಸಿದ ಮಣಿಪಾಲ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಪೊಲೀಸ್‌ ಅಧಿಕ್ಷಕರಾದ ಶ್ರೀ ಅಕ್ಷಯ್ ಮಚಿಂದ್ರ ಹಾಕೆ ಐ.ಪಿ.ಎಸ್‌  ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ  ಶ್ರೀ ಸಿದ್ಧಲಿಂಗಪ್ಪ ಟಿ ಕೆ.ಎಸ್‌.ಪಿ.ಎಸ್ ಮತ್ತು ದಿನಕರ ಕೆ.ಪಿ, ಡಿ.ವೈ.ಎಸ್.ಪಿ ಉಡುಪಿ ರವರು ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.

 
 
 
 
 
 
 
 
 
 
 

Leave a Reply