ಅಂತರ್ ಜಿಲ್ಲಾ ಕಳ್ಳನ ಬಂಧನ~ ಚಿನ್ನಾಭರಣ ವಶ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮನೆ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಅಂತರ್ ಜಿಲ್ಲಾ ಆರೋಪಿಯ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೈಸೂರಿನ ಹೂಟಗಳ್ಳಿಯ ನಿವಾಸಿ ಸಿದ್ದರಾಜು(52) ಎಂದು ತಿಳಿದು ಬಂದಿದೆ.
ಸಿಸಿಬಿ ಪೊಲೀಸರು ಬಂಧಿತ ಆರೋಪಿಯಿಂದ ಸುಮಾರು ರೂ 15,00,000/- ಮೌಲ್ಯದ 27 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ‌ ಹೀರೊ ಹೊಂಡಾ ಸ್ಪ್ಲೆಂಡರ್ ಪ್ಲಸ್ ಮೋಟಾರ್ ಸೈಕಲ್’ ಹಾಗೂ 2 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಸಿದ್ದರಾಜು ಮಂಗಳೂರು ನಗರದ ಕಾವೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ, ಉಡುಪಿ ಜಿಲ್ಲೆಯ ಮಣಿಪಾಲ, ಕಾರ್ಕಳ, ಶಿವಮೊಗ್ಗ ಜಿಲ್ಲೆಯ ಆಗುಂಬೆ, ತೀರ್ಥಹಳ್ಳಿ, ಮಾಲೂರು, ಕಾರ್ಗಲ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಹರಿಹರಪುರ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಕಳ್ಳತನ ಮಾಡಿರುವುದು ಪೊಲೀಸರು ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ. ಆರೋಪಿಯು ಒಟ್ಟು 13 ಪ್ರಕರಣಗಳಲ್ಲಿ ಕಳ್ಳತನ ಮಾಡಿರುವ ಚಿನ್ನಾಭರಣಗಳನ್ನು ಸ್ವಾಧೀನಪಡಿಸಿ ಕೊಳ್ಳಲಾಗಿದೆ ಎಂದು ತಿಳಿಯಲಾಗಿದೆ.
 
 
 
 
 
 
 
 
 
 
 

Leave a Reply