ಇಬ್ಬರು ಪೋಲೀಸರ ಮನೆಗೆ ಖದೀಮರು ಕನ್ನ ಹಾಕಿರುವ ಘಟನೆ ಕಲಬುರಗಿ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ನಡೆದಿದೆ.
ನಿವೃತ್ತ ಕೆಎಸ್ಆರ್ಪಿ ಪೇದೆ ಸಿದ್ದಲಿಂಗಯ್ಯ ಹಿರೇಮಠ್ ಹಾಗೂ ಬೆಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಎಫ್ಡಿಎ ಆಗಿರುವ ಮಹಾಂತೇಶ್ ಹಂಗರಗಿ ಮನೆಯಲ್ಲಿ ಕಳ್ಳತನವಾಗಿದೆ.
ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಕನ್ನ ಹಾಕಿರುವ ಖದೀಮರು, ಸಿದ್ದಲಿಂಗಯ್ಯ ಮನೆಯಲ್ಲಿ 10 ಗ್ರಾಂ ಚಿನ್ನ, 20 ಸಾವಿರ ನಗದು ಹಣ, 10 ರೇಷ್ಮೆ ಸೀರೆ ಕದ್ದಿದ್ದಾರೆ. ಅದೇ ರೀತಿ ಮಹಾಂತೇಶ್ ಅವರ ಮನೆಯಲ್ಲಿ 50 ಗ್ರಾಂ ಚಿನ್ನ, 10,000 ನಗದು ಹಣ ಹಾಗೂ 4 ಬೈಕ್ಗಳ ಪೆಟ್ರೋಲ್ ಕಳ್ಳತನ ಮಾಡಿದ್ದಾರೆ.
ಕಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಆರ್ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.