ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿದ ಖದೀಮರು!

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ನರ್ಸಿಂಗ್‌ ವಿದ್ಯಾರ್ಥಿನಿಯ ಕೈಯಲ್ಲಿದ್ದ ಮೊಬೈಲ್‌ನ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಕಳ್ಳರು ಎಗರಿಸಿ ಪರಾರಿಯಾದ ಘಟನೆ ತೊಕ್ಕೊಟ್ಟು-ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆಯ ದೇರಳಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.

ಕುನ್ಸಾಂಗ್ ಲಚಿಕ್ ಅನ್ನುವ ನರ್ಸಿಂಗ್ ವಿದ್ಯಾರ್ಥಿನಿ ಕೈಯಲ್ಲಿದ್ದ ಮೊಬೈಲನ್ನು ಕಳುವಾಗಿದೆ. ಮೂವರು ವಿದ್ಯಾರ್ಥಿನಿಯರು ಶಾಪಿಂಗ್‌ ಮುಗಿಸಿ ಹಾಸ್ಟೆಲ್ ಕಡೆಗೆ ವಾಪಸ್ಸಾಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 
 
 
 
 
 
 
 
 
 
 

Leave a Reply