ಉಪನ್ಯಾಸಕ ಸೇರಿ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು

 
ಕುಂದಾಪುರ: ಕಂದಾವರ ಡಂಪಿಂಗ್ ಯಾರ್ಡ್‌ ಹತ್ತಿರದ ಮದಗಕ್ಕೆ ಈಜಲು ತೆರಳಿದ್ದ ಶಂಕರನಾರಾಯಣ ಮದರ್ ಥೇರಸಾ ಕಾಲೇಜಿನ ಉಪನ್ಯಾಸಕ ಸೇರಿ ಇಬ್ಬರು ನೀರು ಪಾಲಾದ ಘಟನೆ ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು-ಕಾಡಿನಕೊಂಡ ಎಂಬಲ್ಲಿ ನಡೆದಿದೆ.
 
ಮೃತರು ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ್(28) ಹಾಗೂ ಶಂಕರನಾರಾಯಣ ಹೈಸ್ಕೂಲ್ ವಿದ್ಯಾರ್ಥಿ ಭರತ್ ಶೆಟ್ಟಿಗಾರ್(15) ಎಂದು ತಿಳಿದು ಬಂದಿದೆ. ನಾಲ್ಕು ಎಕರೆ ವಿಸ್ತಾರದ ಮದಗಕ್ಕೆ ವಾರಾಹಿ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿದು ಬಂದಿರುವ ಉಳ್ಳೂರು – ಕಂದಾವರದ ಬೊಬ್ಬಯ೯ ಕೊಡ್ಲು ಮದಗಕ್ಕೆ 6 ಜನ ಈಜಲು ತೆರಳಿದ್ದಾರೆ.
ಸುಮಾರು 10 ಫೀಟ್ ನೀರಿರುವ ಮದಗದಲ್ಲಿ ಭರತ್ ಆಯತಪ್ಪಿ ಮುಳುಗಿದ್ದನ್ನು ನೋಡಿದ ರಾಜೇಂದ್ರ ರಕ್ಷಣೆಗೆ ತೆರಳಿದಾಗ ಈಜು ಬಾರದ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
 
ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಇಬ್ಬರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
 
 
 
 
 
 
 
 
 
 

Leave a Reply